March 10, 2026
Tuesday, March 10, 2026
spot_img

ಯಾದಗಿರಿಯಲ್ಲಿ ಭೀಕರ ಅಪಘಾತ: ಖಾಸಗಿ ಶಾಲಾ ಬಸ್ ಹರಿದು ಬಾಲಕ ಸಾವು

ಹೊಸದಿಗಂತ ವರದಿ, ಯಾದಗಿರಿ:


ಖಾಸಗಿ ಶಾಲಾ ಬಸ್ ಹರಿದು ಬಾಲಕ ಸಾವನ್ನಪ್ಪಿದ ಘಟ‌ನೆ ಗುರಮಠಕಲ್ ತಾಲೂಕಿನ ಗಾಜರಕೋಟ್ ಗ್ರಾಮದಲ್ಲಿ ಮಂಗಳವಾರ ನಡೆದಿದೆ.

ಪುನೀತ್ ( 4) ಮೃತಪಟ್ಟ ಬಾಲಕ. ಗ್ರಾಮದ ವಿಸ್ಡಮ್ ಶಾಲೆಯಲ್ಲಿ ಓದುತ್ತಿದ್ದ ಎಂದಿನಂತೆ ಶಾಲೆ ಬಸ್ ಬಾಲಕನನ್ನು ಕೆಳಗಿಳಿಸಿದ ಬಳಿಕ ಚಾಲಕ ಬಸ್ ರಿವರ್ಸ್ ತೆಗೆದುಕೊಳ್ಳುವಾಗ ದುರ್ಘಟನೆ ನಡೆದಿದೆ.

ವಿದ್ಯಾರ್ಥಿಗಳನ್ನು ಕೆಳಗಿಳಿಸಿದ ಚಾಲಕ ಹಿಂಬದಿ ನೋಡದೆ ರಿವರ್ಸ್ ತೆಗೆದುಕೊಂಡ ಆರೋಪ ಕೇಳಿ ಬಂದಿದೆ. ಬಸ್ ರಿವರ್ಸ್ ತೆಗೆದುಕೊಳ್ಳುವಾಗ ಹಿಂಬದಿಯ ಟೈಯರ್ ಗೆ ಸಿಲುಕಿ ಬಾಲಕ ಸಾವನ್ನಪ್ಪಿದ್ದಾನೆ.

ಘಟನೆಯಿಂದ ಗ್ರಾಮದಲ್ಲಿ ಬಾಲಕನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಗುರುಮಠಕಲ್ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !