ಹಾಸನಾಂಬೆ ದರುಶನ ಮುಗಿಸಿ ಹಿಂತಿರುಗುವ ವೇಳೆ ಭೀಕರ ಅಪಘಾತ: ಇಬ್ಬರು ಮೃತ್ಯು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹಾಸನಾಂಬೆ ದೇವಿಯ ದರುಶನ ಮುಗಿಸಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಒಂದೇ ಕುಟುಂಬದ ಮೂವರಿಗೆ ಕಾರು ಡಿಕ್ಕಿ ಹೊಡೆದಿದೆ. ಘಟನೆಯಿಂದ ತಂದೆ-ಮಗಳು ಸಾವನ್ನಪ್ಪಿದ್ದು, ತಾಯಿ ಸ್ಥಿತಿ ಚಿಂತಾಜನಕವಾಗಿದೆ. ಹಾಸನ ನಗರದ ತಣ್ಣೀರಹಳ್ಳ ಎಂಬಲ್ಲಿ ಈ ದುರ್ಘಟನೆ ನಡೆದಿದೆ.

ದುರದೃಷ್ಟವಶಾತ್ ಕುಮಾರ್ (38) ಮತ್ತು ಕಾವ್ಯ (12) ಮೃತ ದುರ್ದೈವಿಗಳು.

ಗುರುವಾರ ಸಂಜೆ ಕುಮಾರ ಪತ್ನಿ ಪುಟ್ಟಮ್ಮ ಹಾಗೂ ಮಗಳು ಕಾವ್ಯ ಅವರೊಂದಿಗೆ ಹಾಸನಾಂಬೆ ದೇವಿ ದರುಶನಕ್ಕೆ ತೆರಳಿದ್ದರು. ಮೂವರು ದೇವಿಯ ದರುಶನ ಪಡೆದು ರಸ್ತೆ ಬದಿಯ ವಿಜಯನಗರದಲ್ಲಿರುವ ಸಂಬಂಧಿಕರ ಮನೆಗೆ ತೆರಳುತ್ತಿದ್ದಾಗ ವೇಗವಾಗಿ ಬಂದ ಸ್ವಿಫ್ಟ್ ಕಾರು ಡಿಕ್ಕಿ ಹೊಡೆದಿದೆ.

ಕುಮಾರ್ ಮತ್ತು ಕಾವ್ಯ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಾಳು ಪುಟ್ಟಮ್ಮ ಸ್ಥಿತಿ ಚಿಂತಾಜನಕವಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!