ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಂಧ್ರಪ್ರದೇಶದ ನಂದ್ಯಾಳ ಅಲ್ಲಗಡ್ಡ ಮಂಡಲದ ನಲ್ಲಗಟ್ಲ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ನವ ವಿವಾಹಿತ ದಂಪತಿ ಸೇರಿದಂತೆ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದಾರೆ.
ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎಂದು ನಂದ್ಯಾಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಘುವೀರ ರೆಡ್ಡಿ ತಿಳಿಸಿದ್ದಾರೆ.
ಬುಧವಾರ ಮುಂಜಾನೆ 5:15 ರ ಸುಮಾರಿಗೆ ಕುಟುಂಬವು ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿ ಹಿಂದಿರುಗುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಹೇಳಿದ್ದಾರೆ. ಚಾಲಕನ ನಿರ್ಲಕ್ಷ್ಯವೇ ಈ ಅವಘಡಕ್ಕೆ ಕಾರಣ ಎನ್ನಲಾಗಿದೆ. ಮೃತರು ಹೈದರಾಬಾದ್ ಮೂಲದವರು ಎಂದು ಗುರುತಿಸಲಾಗಿದೆ.