ಫಾಝೀಲ್ ಹತ್ಯೆ ಪ್ರಕರಣ: ಬಂಧಿತರು ಎರಡು ವಾರ ಪೊಲೀಸ್ ಕಸ್ಟಡಿಗೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಸುರತ್ಕಲ್ ಮಂಗಳಪೇಟೆ ನಿವಾಸಿ ಫಾಝಿಲ್ ಹತ್ಯೆ ಪ್ರಕರಣದ ಬಂಧಿತ ಆರೋಪಿಗಳನ್ನು ನ್ಯಾಯಾಲಯ 14 ದಿನಗಳ ಪೊಲೀಸ್‌ ಕಸ್ಟಡಿಗೆ ಒಪ್ಪಿಸಿದೆ.

ಪ್ರಕರಣ ಕುರಿತು ಹೆಚ್ಚಿನ ವಿಚಾರಣೆ ಅಗತ್ಯವಿದೆ. ಈ ಹಿನ್ನಲೆಯಲ್ಲಿ ತಮ್ಮ ಕಸ್ಟಡಿಗೆ ಒಪ್ಪಿಸುವಂತೆ ಪೊಲೀಸರು ನ್ಯಾಯಾಲಯಕ್ಕೆ ಮನವಿ ಮಾಡಿದ್ದು, ಮನವಿ‌ ಪುರಸ್ಕರಿಸಿದ ನ್ಯಾಯಾಲಯ ಅವರನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.

ಈ ಪ್ರಕರದಲ್ಲಿ‌ ಸುಹಾಸ್‌ ಶೆಟ್ಟಿ, ಮೋಹನ್‌, ಅಭಿಷೇಕ್‌, ಶ್ರೀನಿವಾಸ್‌, ದೀಕ್ಷಿತ್‌ ಮತ್ತು ಗಿರಿಧರ್‌ನನ್ನು ಬಂಧಿಸಲಾಗಿತ್ತು.
ಇನ್ನು ಕಾರು ಮಾಲಕ ಅಜಿತ್‌ ಕ್ರಾಸ್ತಾ, ಹತ್ಯೆ ಬಳಿಕ ಕಾರನ್ನು ನಿರ್ಜನ ಪ್ರದೇಶದಲ್ಲಿ ಬಿಟ್ಟು ಆರೋಪಿಗಳು ತಪ್ಪಿಸಿಕೊಳ್ಳಲು ನೆರವಾದವರು ಯಾರು ಎನ್ನುವ ಬಗ್ಗೆ ತನಿಖೆ ನಡೆಯಬೇಕಿದ್ದು, ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!