ಹೊಸದಿಗಂತ ಡಿಜಿಟಲ್ ಡೆಸ್ಕ್
ಸುರತ್ಕಲ್ನಲ್ಲಿ ಗುರುವಾರ ರಾತ್ರಿ ವೇಳೆ ನಡೆದ ಫಾಝಿಲ್ ಕೊಲೆ ಪ್ರಕರಣದ ತನಿಖೆಗೆ ಮಂಗಳೂರು ಉತ್ತರ ಉಪವಿಭಾಗ ಸಹಾಯಕ ಪೊಲೀಸ್ ಆಯುಕ್ತ ಮಹೇಶ್ ಕುಮಾರ್ ಅವರನ್ನು ತನಿಖಾಧಿಕಾರಿಯಾಗಿ ನೇಮಿಸಲಾಗಿದೆ.
ಮಹಮ್ಮದ್ ಫಾಝಿಲ್ ಕೊಲೆ ಕೃತ್ಯಕ್ಕೆ ಸಂಬಂಧಿಸಿ ಆರೋಪಿಗಳ ವಿರುದ್ಧ ಐಪಿಸಿ 143, 147, 148, 504, 326, 307, 302, 506 ಜತೆಗೆ 147 ಸೆಕ್ಷನ್ನಡಿ ಪ್ರಕರಣ ದಾಖಲಾಗಿದೆ. ಮೃತ ಯುವಕನ ಸಂಬಂಧಿಕರು ಉನ್ನತ ಅಧಿಕಾರಿಗಳಿಂದ ತನಿಖೆ ನಡೆಸುವಂತೆ ಮನವಿ ಮಾಡಿದ ಹಿನ್ನಲೆಯಲ್ಲಿ ನಗರ ಪೊಲೀಸ್ ಕಮಿಷನರ್ ಆಯುಕ್ತ ಶಶಿಕುಮಾರ್ ಅವರು ತನಿಖಾಧಿಕಾರಿಯಾಗಿ ಮಹೇಶ್ ಅವರನ್ನು ನಿಯೋಜಿಸಿ ಆದೇಶ ಮಾಡಿದ್ದಾರೆ.
ಇದೇ ವೇಳೆ ಮೃತ ಫಾಜಿಲ್ ತಂದೆ ಉಮ್ಮರ್ ಫಾರೂಕ್ ಅವರು, ಈ ಘಟನೆಯಲ್ಲಿ ನೈಜ ಆರೋಪಿಗಳನ್ನು ಬಂಧಿಸುವಂತೆ ಕೋರಿ ಪೊಲೀಸ್ ಕಮಿಷನರ್ಗೆ ಮನವಿ ಸಲ್ಲಿಸಿದ್ದಾರೆ.