ಹೊಸದಿಗಂತ ವರದಿ, ಮಂಗಳೂರು:
ನಗರದ ಹೊರವಲಯದ ಸುರತ್ಕಲ್ ಪೇಟೆಯಲ್ಲಿ ಗುರುವಾರ ರಾತ್ರಿ ನಡೆದ ಮುಹಮ್ಮದ್ ಫಾಝಿಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ 21 ಕ್ಕೂ ಅಧಿಕ ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಇದೀಗ ಹತ್ಯೆಗೆ ಬಳಸಿದ ಕಾರಿನ ಮಾಲಿಕನನ್ನು ವಿಚಾರಣೆಗೊಳಪಡಿಸಲಾಗಿದೆ.
ಕಾರಿನ ಗುರುತು ಪತ್ತೆ ಹಚ್ಚಿರುವ ಸಿಸಿಬಿ ಪೊಲೀಸರು ಕಾರಿನ ಮಾಲಕನನ್ನು ಸಿಸಿಬಿ ಕಚೇರಿಗೆ ಕರೆತಂದು ಮಾಹಿತಿ ಕಲೆಹಾಕುತ್ತಿದ್ದಾರೆ.
ಬೆಳ್ಳಾರೆಯಲ್ಲಿ ನಡೆದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳಿಗಾಗಿಯೂ ಕಾರ್ಯಾಚರಣೆಯನ್ನು ಪೊಲೀಸರು ಚುರುಕುಗೊಳಿಸಿದ್ದಾರೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ