ಫಾಝಿಲ್ ಹಂತಕರ ಸುಳಿವು ಸಿಕ್ಕಿದೆ: ಎಡಿಜಿಪಿ ಅಲೋಕ್ ಕುಮಾರ್

ಹೊಸದಿಗಂತ ವರದಿ, ಮಂಗಳೂರು:

ನಗರದ ಹೊರವಲಯದ ಸುರತ್ಕಲ್‌ನಲ್ಲಿ ಹತ್ಯೆಗೀಡಾದ ಫಾಝಿಲ್ ಹತ್ಯೆ ಪ್ರಕರಣದ ಆರೋಪಿಗಳ ಸುಳಿವು ಸಿಕ್ಕಿದ್ದು, ಶೀಘ್ರವಾಗಿ ಬಂಧಿಸಲು ಕಾರ್ಯಾಚರಣೆ ಕೈಗೆತ್ತಿಕೊಳ್ಳಲಾಗಿದೆ ಎಂದು ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಾಥಮಿಕ ತನಿಖೆಯಲ್ಲಿ ಆರೋಪಿಗಳ ಸುಳಿವು ಸಿಕ್ಕಿದ್ದು, ವಿಶೇಷ ಕಾರ್ಯಾಚರಣೆ ನಡೆಸಿ ಬಂಧಿಸಲಾಗುವುದು. ಜಿಲ್ಲೆಯ ಜನತೆ ಶಾಂತಿ ಸುವ್ಯವಸ್ಥೆ ಕಾಪಾಡಲು ಒತ್ತು ನೀಡಬೇಕು. ಯಾವುದೇ ಊಹಾಪೋಹಗಳಿಗೆ ಕಿವಿಗೊಡಬಾರದು. ಪೊಲೀಸ್ ಇಲಾಖೆ ಆರೋಪಿಗಳನ್ನು ಬಂಧಿಸಲಿದೆ ಎಂದರು.

ಘಟನೆ ನಡೆದ ಸ್ಥಳದಲ್ಲಿನ ಸಿಸಿಟಿವಿ ಕ್ಯಾಮೆರಾ ದೃಶ್ಯ ಆಧರಿಸಿ ಕಾರು ಪತ್ತೆ ಹಚ್ಚಿ ತನಿಖೆ ನಡೆಸಿ ತನಿಖೆ ನಡೆಯುತ್ತಿದೆ. ಈ ಸಂದರ್ಭದಲ್ಲಿ ಸಾರ್ವಜನಿಕರು ಪೊಲೀಸರಿಗೆ ಸಹಕಾರ ನೀಡಬೇಕು ಎಂದು ಎಡಿಜಿಪಿ ಮನವಿ ಮಾಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!