Thursday, March 23, 2023

Latest Posts

ಯುಪಿಯಲ್ಲಿ ಗ್ಯಾಂಗ್‌ಸ್ಟರ್‌ ಗಳಿಗೆ ಎನ್‌ಕೌಂಟರ್‌ ಭೀತಿ: ನನ್ನನ್ನು ಜೈಲಿನಿಂದ ಬಿಡುಗಡೆ ಮಾಡಬೇಡಿ ಎಂದ ಅಶ್ರಫ್‌!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಉತ್ತರ ಪ್ರದೇಶದಲ್ಲಿಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಕಾನೂನು ಸುವ್ಯವಸ್ಥೆಯಲ್ಲಿ ಖಡಕ್ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ.

ಬಿಎಸ್‌ಪಿ ಮಾಜಿ ಶಾಸಕ ರಾಜು ಪಾಲ್‌ ಹತ್ಯೆಯ ಪ್ರಮುಖ ಸಾಕ್ಷಿಯಾಗಿದ್ದ ಉಮೇಶ್‌ ಪಾಲ್‌ ಹತ್ಯೆಯ ಆರೋಪಿ ಅರ್ಬಾಜ್‌ ಖಾನ್‌ನನ್ನು ಪ್ರಯಾಗರಾಜ್‌ನಲ್ಲಿ ಪೊಲೀಸರು ಎನ್‌ಕೌಂಟರ್‌ ಮಾಡಿದ್ದಾರೆ. ಇದರ ಬೆನ್ನಲ್ಲೇ, ರಾಜು ಪಾಲ್‌ ಹತ್ಯೆಯ ಆರೋಪಿ, ಗ್ಯಾಂಗ್‌ಸ್ಟರ್‌ ಆತಿಕ್‌ ಅಹ್ಮದ್‌ ತಮ್ಮ, ಮಾಜಿ ಶಾಸಕ ಅಶ್ರಫ್‌ಗೆ ಎನ್‌ಕೌಂಟರ್‌ ಭೀತಿ ಶುರುವಾಗಿದೆ.ನನ್ನನ್ನು ಜೈಲಿನಿಂದ ಬಿಡುಗಡೆ ಮಾಡಬೇಡಿ ಎಂಬುದಾಗಿ ಕೋರ್ಟ್‌ಗೆ ಮನವಿ ಮಾಡಿದ್ದಾನೆ.

ಉಮೇಶ್‌ ಪಾಲ್‌ ಹತ್ಯೆಯ ಹಿಂದೆ ಆತಿಕ್‌ ಅಹ್ಮದ್‌ ಹಾಗೂ ಅಶ್ರಫ್‌ ಹೆಸರು ಕೇಳಿಬಂದಿದೆ. ಅದರಲ್ಲೂ, ಅಶ್ರಫ್‌ ಬರೇಲಿಯ ಜೈಲಿನಲ್ಲಿದ್ದು, ವಿಚಾರಣೆಗಾಗಿ ಜೈಲಿನಿಂದ ಹೊರಗೆ ಹೋಗಬೇಕಾಗುತ್ತದೆ. ಇಂತಹ ಸಂದರ್ಭದಲ್ಲಿ ಎನ್‌ಕೌಂಟರ್‌ ಭೀತಿ ಇರುವ ಕಾರಣ ಅಶ್ರಫ್‌, ಬರೇಲಿ ಕೋರ್ಟ್‌ ಮೊರೆ ಹೋಗಿದ್ದಾನೆ. ನಾನು ಹೊರಗೆ ಬಂದರೆ ನನ್ನನ್ನು ಹತ್ಯೆ ಮಾಡಲಾಗುತ್ತದೆ. ಹಾಗಾಗಿ, ನನ್ನನ್ನು ಹೊರಗೆ ಬಿಡಬೇಡಿ ಎಂಬುದಾಗಿ ಅರ್ಜಿ ಸಲ್ಲಿಸಿದ್ದಾನೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!