ಸೋಲಿನ ಭಯ ಕಾಂಗ್ರೆಸ್‌ನಿಂದ ಏನೇನೋ ಮಾತನಾಡಿಸ್ತಿದೆ: ಸಿಎಂ ಬೊಮ್ಮಾಯಿ ತಿರುಗೇಟು

ಹೊಸದಿಗಂತ ವರದಿ ಹುಬ್ಬಳ್ಳಿ:

ಸೋಲಿನ ಭೀತಿಯಿಂದ ಹತಾಶರಾಗಿರುವ ಕಾಂಗ್ರೆಸ್ಸಿಗರು ನಮ್ಮ ವಿರುದ್ಧ ಭ್ರಷ್ಟಾಚಾರ ದ ಆರೋಪ‌ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದರು.

ಹುಬ್ಬಳ್ಳಿ ಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಎಂದರೆ ಭ್ರಷ್ಟಾಚಾರ, ಭ್ರಷ್ಟಾಚಾರ ಎಂದರೆ ಕಾಂಗ್ರೆಸ್. ಭ್ರಷ್ಟಾಚಾರ ದಲ್ಲಿ ಮುಳುಗಿ ಕಾಂಗ್ರೆಸ್ ಕೈ ಸಂಪೂರ್ಣ ಕಪ್ಪಾಗಿದೆ. ಚುನಾವಣೆಯಲ್ಲಿ ಜನ ಉತ್ತರ ಕೊಡುತ್ತಾರೆ ಎಂದರು.

ಜನರು ಎಲ್ಲವನ್ನು ಗಮನಿಸುತ್ತಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಅವರು ಹತಾಶರಾಗಿ ಮಾತನಾಡುತ್ತಿದ್ದಾರೆ. ನೂರಕ್ಕೆ ನೂರರಷ್ಟು ಕಾಂಗ್ರೆಸ್ ಗೆ ಸೋಲಿನ ಭೀತಿ ಕಾಡುತ್ತಿದೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!