ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾವೇರಿ ಜಲಾನಯನ ಪ್ರದೇಶದ ಮೂರು ಕ್ಷೇತ್ರಗಳಲ್ಲಿ ಮಾಜಿ ಪ್ರಧಾನಿ ದೇವೇಗೌಡರ ಕುಟುಂಬಸ್ಥರು ಸ್ಪರ್ಧಿಸುತ್ತಿದ್ದಾರೆ. ಮೇಕೆದಾಟು ಯೋಜನೆಗೆ ಪಕ್ಷಾತೀತವಾಗಿ ಹೋರಾಟ ನಡೆಸಬೇಕು ಎಂದು ದೇವೇಗೌಡರು ಹೇಳಿದ್ದು, ಜನರು ತಮ್ಮನ್ನು ತಿರಸ್ಕರಿಸುತ್ತಾರೆ ಎಂಬ ಆತಂಕದಲ್ಲಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಟೀಕಿಸಿದರು.
ಮೇಕೆದಾಟು ಯೋಜನೆಗಾಗಿ ಪಾದಯಾತ್ರೆ ಹೋಗಿದ್ದೆವು. ಆಗ ದೇವೇಗೌಡರು ಬೆಂಬಲಿಸಲಿಲ್ಲ. ಅವರ ಕುಟುಂಬದ ಸೋಲಿನ ಭಯದಿಂದ ಎಲ್ಲಾರು ಈಗ ಒಟ್ಟಾಗಿ ಹೋರಾಡಬೇಕು ಎಂದು ಹೇಳಿಕೊಳ್ಳುತ್ತಾರೆ. ದೇವೇಗೌಡರೇ ಈ ಜನರು ಮೂರ್ಖರಲ್ಲ. ನಿಮ್ಮನ್ನು, ಕುಮಾರಣ್ಣನವರನ್ನು ನೋಡಿದ್ದಾರೆ.
ಇಂದು ನಮ್ಮ ಸರ್ಕಾರ ಅಧಿಕಾರದಲ್ಲಿದ್ದು, ಈ ಯೋಜನೆಯನ್ನು ಅನುಷ್ಠಾನಗೊಳಿಸಲು ನೀರಾವರಿ ಮತ್ತು ಬೆಂಗಳೂರು ಉಸ್ತುವಾರಿ ವಹಿಸಿ ಇತಿಹಾಸ ಸೃಷ್ಟಿಸಲು ಈ ಯೋಜನೆಗಾಗಿ ನಾವು ಸಿದ್ಧತೆ ನಡೆಸಿದ್ದೇವೆ ಎಂದು ಹೇಳಿದ್ದಾರೆ.