ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎನ್ಐಟಿ), ಶ್ರೀನಗರದಲ್ಲಿ ವಾಲಿಬಾಲ್ ಪಂದ್ಯ ಮುಗಿದ ನಂತರ ಎರಡು ಗುಂಪುಗಳ ವಿದ್ಯಾರ್ಥಿಗಳ ನಡುವೆ ಮಾರಾಮಾರಿ ನಡೆದಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎನ್ನಲಾಗಿದೆ.
ಎನ್ಐಟಿ ಅಧಿಕಾರಿಗಳಿಂದ ಮಾಹಿತಿ ಪಡೆದ ಪೊಲೀಸರು ಕ್ಯಾಂಪಸ್ಗೆ ಆಗಮಿಸಿ ತನಿಖೆ ನಡೆಸಿದ್ದಾರೆ.
ಪೊಲೀಸರ ಪ್ರಕಾರ ವಿವಿಧ ಬ್ಯಾಚ್ಗಳಿಗೆ ಸೇರಿದ ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ತಡರಾತ್ರಿ ಘರ್ಷಣೆ ನಡೆದಿದೆ.
ಶ್ರೀನಗರ ಪೊಲೀಸರು ಈ ಕುರಿತು ಟ್ವೀಟ್ ಮಾಡಿದ್ದು “ಎನ್ಐಟಿ ಶ್ರೀನಗರದಲ್ಲಿ ತಡರಾತ್ರಿ ನಡೆದ ಗಲಾಟೆಯಲ್ಲಿ ವಾಲಿಬಾಲ್ ಪಂದ್ಯದ ಅಂತ್ಯದ ನಂತರ ವಿವಿಧ ಬ್ಯಾಚ್ಗಳಿಗೆ ಸೇರಿದ 2 ಗುಂಪುಗಳ ವಿದ್ಯಾರ್ಥಿಗಳು ಘರ್ಷಣೆ ನಡೆಸಿದರು. ಎರಡೂ ಕಡೆಯ 5 ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಎನ್ಐಟಿ ಅಧಿಕಾರಿಗಳ ಕೋರಿಕೆಯ ಮೇರೆಗೆ ಪೊಲೀಸರು ಕ್ಯಾಂಪಸ್ಗೆ ಪ್ರವೇಶಿಸಿದ್ದು, ಈಗ ಪರಿಸ್ಥಿತಿ ತಿಳಿಯಾಗಿದೆ” ಎಂದಿದ್ದಾರೆ.
ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.