‘ವಿಕ್ರಾಂತ್ ರೋಣ’ ಚಿತ್ರ ಪ್ರದರ್ಶನದ ವೇಳೆ ಮಾರಾಮಾರಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಚಿಕ್ಕಮಗಳೂರು ನಗರದ ಸಿನಿಮಾ ಥಿಯೇಟರ್​​ ನಲ್ಲಿ ‘ವಿಕ್ರಾಂತ್ ರೋಣ’ ಚಿತ್ರ ಪ್ರದರ್ಶನದ ವೇಳೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ. ಈ ಗಲಾಟೆಯಲ್ಲಿ ನಡುರಸ್ತೆಯಲ್ಲೇ ಹಾಡಹಗಲೇ ಲಾಂಗ್ ಝಳಪಿಸಿ, ಯುವಕನೋರ್ವ ಮೇಲೆ ಹಲ್ಲೆ ಮಾಡಲಾಗಿದೆ.
ಮಿಲನ ಚಿತ್ರಮಂದಿರದ ಹೊರಾಂಗಣದಲ್ಲಿ ಈ ಮಾರಾಮಾರಿ ಆಗಿದ್ದು, ಭರತ್ ಎಂಬ ಯುವಕನ ಮೇಲೆ ಎದುರಾಳಿ ಗುಂಪು ಹಲ್ಲೆ ನಡೆಸಿದೆ. ಭರತ್​ ನೆಲಕ್ಕೆ ಬಿದ್ದರೂ ಬಿಡದೆ ಯುವಕರ ತಂಡ ಹಲ್ಲೆಗೈದಿದ್ದು, ತೀವ್ರವಾಗಿ ಗಾಯಗೊಂಡಿದ್ದಾನೆ.
ವಿಷಯ ತಿಳಿದು ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಗಾಯಾಳು ಭರತ್​ನನ್ನು ಹೆಚ್ಚಿನ ಚಿಕಿತ್ಸೆಗೆ ಹಾಸನಕ್ಕೆ ರವಾನೆ ಮಾಡಿದ್ದಾರೆ. ಈ ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಹೆಚ್ಚಿನ ತನಿಖೆಯನ್ನು ಮುಂದುವರಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!