ಜಾತಿಗಣತಿ ವರದಿ ಜಾರಿಯಾದ್ರೆ ಹೋರಾಟ: ಲಿಂಗಾಯತ ಸಚಿವರ ಸಭೆಯಲ್ಲಿ ಮಹತ್ವದ ನಿರ್ಣಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಒಂದೆಡೆ ಜಾತಿಗಣತಿ ವರದಿ ಜಾರಿ ಸಂಬಂಧ ವಿಶೇಷ ಸಚಿವ ಸಂಪುಟ ಸಭೆ ನಡೆಯುತ್ತಿದ್ದರೇ, ಮತ್ತೊಂದೆಡೆ ಜಾತಿ ಗಣತಿ ವರದಿ ಜಾರಿಯಾದ್ರೆ ಒಟ್ಟಾಗಿ ಹೋರಾಟ ಮಾಡುವ ಕರೆಯನ್ನು ವೀರಶೈವ ಲಿಂಗಾಯತ ಮತ್ತು ಒಕ್ಕಲಿಗ ಸಮುದಾಯಗಳು ಕರೆ ಕೊಟ್ಟಿವೆ.

ಅತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ (ಏ.17) ವಿಶೇಷ ಸಚಿವ ಸಂಪುಟ ಸಭೆ (Cabinet Meeting) ನಡೆಸುತ್ತಿದ್ದಾರೆ. ಈ ಸಂಪುಟ ಸಭೆಗೂ ಮುನ್ನ ಲಿಂಗಾಯತ ಸಮುದಾಯದ ಸಚಿವರು ಪ್ರತ್ಯೇಕ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಲಿಂಗಾಯತ ಸಚಿವರು ಮಹತ್ವದ ನಿರ್ಣಯವನ್ನು ಕೈಗೊಂಡಿದ್ದಾರೆ.

ಲಿಂಗಾಯತ ಸಮುದಾಯದ ಸಚಿವರು ನಡೆಸಿದ ಸಭೆಯಲ್ಲಿ ಜಾತಿ ಗಣತಿ ವರದಿ ತಿರಸ್ಕಾರ ಮಾಡಬೇಕೆಂದು ನಿರ್ಣಯ ಕೈಗೊಂಡಿದ್ದಾರೆ. ಒಂದು ವೇಳೆ ಜಾತಿಗಣತಿ ವರದಿ ತಿರಸ್ಕರಿಸಲಾಗದೆ ಇದ್ದರೆ ಸಾರ್ವಜನಿಕಗೊಳಿಸಿ ಚರ್ಚೆಗೆ ಅವಕಾಶ ನೀಡಬೇಕು ಎಂದು ಆಗ್ರಹಿಸಲು ಸಚಿವರು ತೀರ್ಮಾನ ಕೈಗೊಂಡಿದ್ದಾರೆ.

ಕರ್ನಾಟಕದ ಹಿಂದುಳಿದ ವರ್ಗಗಳ ಆಯೋಗ 2015ರಲ್ಲಿ ನಡೆಸಿದ್ದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆಧಾರಿತ ಜಾತಿ ಗಣತಿ ವರದಿ ಅನುಷ್ಠಾನ ಸಂಬಂಧ ಕಳೆದ ಶುಕ್ರವಾರ (ಏ.11) ಸಚಿವ ಸಂಪುಟ ಸಭೆ ನಡೆದಿತ್ತು. ಆದರೆ, ಈ ಸಭೆಯಲ್ಲಿ ಜಾತಿ ಗಣತಿ ವರದಿ ಜಾರಿ ವಿಚಾರವಾಗಿ ಯಾವುದೇ ನಿರ್ಧಾರ ಕೈಗೊಳ್ಳದೆ, ಕೇವಲ ಚರ್ಚೆ ನಡೆದಿತ್ತು.

 

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!