ಬೆಳಗಾವಿಯ ಪಂಚಬಾಳೇಕುಂದ್ರಿ ಗ್ರಾಮದಿಂದ ಸಿಬಿಟಿಗೆ ಬರುತ್ತಿದ್ದ ಬಸ್ನಲ್ಲಿ ಕಿಟಕಿ ಪಕ್ಕದ ಸೀಟ್ಗಾಗಿ ಯುವಕರ ಮಧ್ಯೆ ಗಲಾಟೆ ನಡೆದಿದ್ದು, ಓರ್ವ ಯುವಕನಿಗೆ ಚಾಕು ಇರಿಯಲಾಗಿದೆ.
ಗ್ರಾಮದ ಮಜ್ಜು ಸನದಿ(20) ಎಂಬ ಯುವಕ ಎದೆ ಭಾಗಕ್ಕೆ ಯುವಕರ ಗ್ಯಾಂಗ್ ಒಂದು ಚಾಕು ಇರಿದು ಪರಾರಿ ಆಗಿದೆ. ಬೆಳಗಾವಿ ಬಿಮ್ಸ್ ಆಸ್ಪತ್ರೆ ಐಸಿಯುನಲ್ಲಿ ಮಜ್ಜುಗೆ ಚಿಕಿತ್ಸೆ ನೀಡಲಾಗಿದೆ. ಸ್ಥಳಕ್ಕೆ ಡಿಸಿಪಿ ರೋಹನ್ ಜಗದೀಶ್ ಭೇಟಿ ನೀಡಿ ಪರಿಶೀಲನೆ ಮಾಡಿದರು. ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.