ಯುದ್ಧ ವಿಮಾನ ದುರಂತ: ಪೈಲಟ್ ಹನುಮಂತ ರಾವ್ ಸಾರಥಿ ಪಾರ್ಥಿವ ಶರೀರ ತವರೂರಿಗೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ವಾಯುಪಡೆಯ ಯುದ್ಧ ವಿಮಾನಗಳ ಪತನ ವೇಳೆ ಹುತಾತ್ಮರಾದ ಪೈಲಟ್ ವಿಂಗ್ ಕಮಾಂಡರ್‌ ಬೆಳಗಾವಿಯ ಗಣೇಶಪುರದ ಹನುಮಂತರಾವ್ ರೇವಣಸಿದ್ದಪ್ಪ ಸಾರಥಿ ಅವರಿಗೆ ಗಣ್ಯರು ಅಂತಿಮ ನಮನ ಸಲ್ಲಿಸಿದರು.

ಮೃತ ಯೋಧನ ಪಾರ್ಥೀವ ಶರೀರವನ್ನು ಸೇನೆಯ‌ ವಿಶೇಷ ವಿಮಾನದ ಮೂಲಕ ಭಾನುವಾರ ಬೆಳಗಾವಿ ವಿಮಾನ ನಿಲ್ದಾಣಕ್ಕೆ ತರಲಾಗಿದ್ದು, ಗಣ್ಯರು ಪುಷ್ಪಗುಚ್ಛ ಸಮರ್ಪಿಸಿ ಅಂತಿಮ ನಮನ ಸಲ್ಲಿಸಿದ್ದಾರೆ.

ಗ್ವಾಲಿಯರ್ ನಲ್ಲಿ ತರಬೇತಿ ಕಾರ್ಯಾಚರಣೆಯಲ್ಲಿದ್ದ ಯುದ್ಧ ವಿಮಾನ ಪತನದಿಂದ ಬೆಳಗಾವಿಯ ವಿಂಗ್ ಕಮಾಂಡರ್ ಹನುಮಂತರಾವ್ ಸಾರಥಿ ನಿಧನರಾದ ವಿಷಯ ತಿಳಿದು ತುಂಬ ದುಃಖವಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸಂತಾಪ ವ್ಯಕ್ತಪಡಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!