ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್‌ ವಿರುದ್ಧ ದೂರು ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಾತನ ಧರ್ಮದ ಕುರಿತು ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್‌ ವಿರುದ್ಧ ಮುಜಾಫರ್‌ಪುರ ಸಿವಿಲ್ ನ್ಯಾಯಾಲಯದಲ್ಲಿ ದೂರು ದಾಖಲಾಗಿದೆ.

ವಕೀಲ ಸುನಿಲ್ ಕುಮಾರ್ ಓಜಾ ಅವರು ಉದಯನಿಧಿ ವಿರುದ್ಧ ದೂರು ದಾಖಲಿಸಿದ್ದಾರೆ. ಸನಾತನ ಧರ್ಮಕ್ಕೆ ಸಂಬಂಧಿಸಿದಂತೆ ತಮಿಳುನಾಡು ಸಚಿವ ಉದಯನಿಧಿ ನೀಡಿರುವ ವಿವಾದಾತ್ಮಕ ಹೇಳಿಕೆಯಿಂದಾಗಿ ದೇಶಾದ್ಯಂತ ಹಿಂದುಗಳ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ದೂರುದಾರರು ಆರೋಪಿಸಿದ್ದಾರೆ.

ಉದಯನಿಧಿ ಹೇಳಿಕೆಯು ಹಿಂದು ಮತ್ತು ಸನಾತನ ಧರ್ಮದಲ್ಲಿ ನಂಬಿಕೆಯಿರುವ ದೇಶದ ಕೋಟ್ಯಂತರ ಜನರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದೆ. ರಾಜಕೀಯ ಲಾಭ ಪಡೆಯುವ ಉದ್ದೇಶದಿಂದ ಇಂತಹ ಹೇಳಿಕೆ ನೀಡಿದ್ದಾರೆ. ಇಂತಹ ಸಂದರ್ಭದಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ನ್ಯಾಯಾಲಯ ದೂರು ಸ್ವೀಕರಿಸಿದೆ. ನ್ಯಾಯಾಲಯವು ಈ ವಿಷಯವನ್ನು ಸೆಪ್ಟೆಂಬರ್ 14 ರಂದು ವಿಚಾರಣೆ ನಡೆಸಲಿದೆ ಎಂದು ವಕೀಲ ಸುನಿಲ್ ಕುಮಾರ್ ಓಜಾ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!