ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೊನೆಗೂ ದೆಹಲಿ ನ್ಯಾಯಾಲಯಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಿದ್ದಾರೆ.
ದೆಹಲಿ ಮದ್ಯ ನೀತಿಯಲ್ಲಿ ಅಕ್ರಮ ಹಣ ವರ್ಗಾವಣೆ ನಡೆಸಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್ ಅವರಿಗೆ ಆರು ಬಾರಿ ಇಡಿ ಸಮನ್ಸ್ ನೀಡಿತ್ತು. ಆದರೆ ಅದಕ್ಕೆ ಉತ್ತರ ನೀಡಿರಲಿಲ್ಲ. ಕಡೆಗೆ ಕೋರ್ಟ್ ಅವರಿಗೆ ವಿಚಾರಣೆಗೆ ಬರುವಂತೆ ಆದೇಶ ನೀಡಿತ್ತು.