ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಾಸಕ ವಿನಯ್ ಕುಲಕರ್ಣಿಗೆ ಮತದಾನದಲ್ಲಿ ಭಾಗವಹಿಸಲು ಹೈಕೋರ್ಟ್ ಏಕಸದಸ್ಯ ಪೀಠ ಅನುಮತಿ ನೀಡಿದೆ. ಜೊತೆಗೆ ಮತದಾನ ಮಾಡಿ ತಕ್ಷಣ ಧಾರವಾಡ(Dharwad) ತೊರೆಯುವಂತೆ ಸೂಚಿಸಿದೆ.
ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣಕದಲ್ಲಿ ಸಿಲುಕಿರುವ ವಿನಯ್ ಅವರಿಗೆ ಧಾರವಾಡಕ್ಕೆ ಪ್ರವೇಶಿಸಲು ಸುಪ್ರೀಂಕೋರ್ಟ್ ನಿರ್ಬಂಧ ಹೇರಿತ್ತು. ಈ ಹಿನ್ನಲೆ ಮತದಾನ ಮಾಡಲು ಧಾರವಾಡ ಪ್ರವೇಶ ಕೋರಿದ್ದರು.
ಅದರಂತೆ ಇದೀಗ ಮತದಾನಕ್ಕೆ ಅವಕಾಶ ಸಿಕ್ಕಿದ್ದು, ಧಾರವಾಡ ನಗರದ ಶಾರದಾ ಶಾಲೆಯಲ್ಲಿರುವ ಮತಗಟ್ಟೆ ಸಂಖ್ಯೆ 75 ಕ್ಕೆ ವಿನಯ್ ಕುಲಕರ್ಣಿ ಆಗಮಿಸಲಿದ್ದಾರೆ. ಇನ್ನು ಈಗಾಗಲೆ ಮತಗಟ್ಟೆಗೆ ಆಗಮಿಸಿದ ವಿನಯ ಪತ್ನಿ ಶಿವಲೀಲಾ ಕುಲಕರ್ಣಿ ಅವರು ಪತಿಯ ಆಗಮನಕ್ಕಾಗಿ ಕಾಯುತ್ತಿದ್ದಾರೆ.