ಬೆಂಗಳೂರು ಗ್ರಾಮಾಂತರಕ್ಕೆ ಕೊನೆಗೂ ಜಿಲ್ಲಾ ಕೇಂದ್ರ ಫಿಕ್ಸ್: ಸಚಿವ ಸುಧಾಕರ್ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಬೆಂಗಳೂರು ಗ್ರಾಮಾಂತರಕ್ಕೆ ಈವರೆಗೆ ಇದ್ದ ಜಿಲ್ಲಾ ಕೇಂದ್ರದ ಗೊಂದಲವನ್ನು ಪರಿಹರಿಸಲು ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ದೇವನಹಳ್ಳಿಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನಾಗಿ ಮಾಡಲಾಗುವುದು ಎಂದು ಸಚಿವ ಡಾ. ಸುಧಾಕರ್ ಮಹತ್ವದ ಹೇಳಿಕೆ ನೀಡಿದ್ದಾರೆ.

ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಈ ಮಹತ್ವದ ಹೇಳಿಕೆ ಹೊರ ಬಿದ್ದಿದ್ದು, ಇನ್ನೊಂದು ತಿಂಗಳೊಳಗಾಗಿ ಈ ಕುರಿತ ಅಧಿಕೃತ ಆದೇಶ ಹೊರ ಬೀಳಲಿದೆ ಎಂದು ಹೇಳಲಾಗಿದೆ.

ಹೊಸಕೋಟೆಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನಾಗಿ ಮಾಡಬೇಕೆಂಬ ಕೂಗು ಕೇಳಿ ಬರುತ್ತಿತ್ತಾದರೂ ಇದೀಗ ದೇವನಹಳ್ಳಿಯನ್ನು ಬೆಂಗಳೂರು ಗ್ರಾಮಾಂತರದ ಜಿಲ್ಲಾ ಕೇಂದ್ರವನ್ನಾಗಿಸಲು ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!