ಹೊಸದಿಗಂತ ವಿಟ್ಲ :
ಆಟೋ ಚಾಲಕರೋರ್ವರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಸಮೀಪದ ಶಿವಾಜಿನಗರದಲ್ಲಿ ನಡೆದಿದೆ. ರಮೇಶ್ ಶಿವಾಜಿನಗರ (40) ಮೃತ ವ್ಯಕ್ತಿ.
ರಮೇಶ್ ಅವರು ಆಟೋ ಚಾಲಕರಾಗಿದ್ದು, ಬಾಡಿಗೆ ಮನೆಯಲ್ಲಿ ವಾಸವಿದ್ದರು. ರಮೇಶ್ ಅವರ ಮನೆಯ ಆರ್ಥಿಕ ಸ್ಥಿತಿಗತಿ ಸರಿ ಇಲ್ಲದ ಕಾರಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ.
ಮೃತರು ಪತ್ನಿ, ಇಬ್ಬರು ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.