ಮೊಸರಿನಲ್ಲಿ ಕಲ್ಲು ಹುಡುಕುವ ಕೆಲಸ ಮಾಡಬಾರದು; ಅಗ್ನಿಪಥದ ಕುರಿತು ಕೇಂದ್ರ ಸಚಿವ ಭಗವಂತ ಖೂಬಾ

ಹೊಸದಿಗಂತ ವರದಿ ವಿಜಯಪುರ:
ಅಗ್ನಿಪಥ ಯೋಜನೆ ಕುರಿತು ಮೊಸರಿನಲ್ಲಿ ಕಲ್ಲು ಹುಡುಕುವ ಕೆಲಸ ಮಾಡಬಾರದು ಎಂದು ಕೇಂದ್ರ ಸಚಿವ ಭಗವಂತ ಖೂಬಾ ಹೇಳಿದರು.

ಅಗ್ನಿಪಥ್ ವಿರೋಧ ಹಿನ್ನೆಲೆ ನಗರದಲ್ಲಿ ಪ್ರತಿಕ್ರಿಯಿಸಿ, ಯುವಕರ ದಾರಿ ತಪ್ಪಿಸುವ ಕೆಲಸ ಮಾಡಲಾಗುತ್ತಿದೆ. ಇದು ಸ್ವಾಸ್ಥ್ಯ ಸಮಾಜಕ್ಕೆ ಶೋಭೆ ತರುವುದಿಲ್ಲ. ಬೆಂಕಿ ಹಚ್ಚುವುದು, ಕಲ್ಲು ತೂರಾಟ ಮಾಡುವುದು, ಪ್ರತಿಭಟನೆ ಮಾಡುವುದು ಅಲ್ಲ. ಮೊಸರಿನಲ್ಲಿ ಕಲ್ಲು ಹುಡುಕಿ ಯಶಸ್ವಿಯಾಗಲ್ಲ ಎಂದರು.

ವಿರೋಧ ಪಕ್ಷದವರು ಆರ್‌ಎಸ್ಎಸ್‌ನ್ನು ಅಜೆಂಡಾ ಪರಿಪಾಠ ಮಾಡಿಕೊಂಡಿದ್ದಾರೆ. ಆರ್‌ಎಸ್ಎಸ್ ಅಜೆಂಡಾ ದೇಶದ ಹಿತಕ್ಕಾಗಿ, ದೇಶದ ಭದ್ರತೆಗಾಗಿ ನಿರತವಾಗಿದೆ. ಪ್ರಧಾನಿ ಮೋದಿ ಮೇಲೆ ಸಂಪೂರ್ಣ ವಿಶ್ವಾಸ ಇಡಿ. ರಾಜಕಾರಣ ಮಾಡದೇ ಯುವಕರ ಭವಿಷ್ಯಕ್ಕಾಗಿ ಎಲ್ಲರು ಸಹಕರಿಸಬೇಕು ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!