ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಯತ್ನ: ಸಿದ್ದು, ಡಿಕೆಶಿ, ಸುರ್ಜೇವಾಲಾ ಸೇರಿದಂತೆ 36 ಕಾಂಗ್ರೆಸ್ ನಾಯಕರ ಮೇಲೆ FIR

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಈಶ್ವರಪ್ಪ ವಿರುದ್ಧ ಪತ್ರಿಭಟಿಸಿದ ಕಾಂಗ್ರೆಸ್​ ನಾಯಕರ ವಿರುದ್ಧ ಹೈಗ್ರೌಂಡ್ ಪೊಲೀಸರು ಎಫ್​ಐಆರ್ ದಾಖಲಿಸಿದ್ದಾರೆ.
ಇತ್ತೀಚೆಗೆ ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಯತ್ನ ನಡೆಸಿದ ಹಿನ್ನೆಲೆ ಕಾಂಗ್ರೆಸ್ ನಾಯಕರ ಮೇಲೆ ಎಫ್ಐಆರ್ ದಾಖಲಾಗಿದೆ. ಯಾವುದೇ ಅನುಮತಿ ಪಡೆಯದೆ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಿದ ಹಿನ್ನೆಲೆ ವಿಪಕ್ಷ ನಾಯಕ ಸಿದ್ದರಾಮಯ್ಯ A1, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ A2, ರಂದೀಪ್ ಸಿಂಗ್ ಸುರ್ಜೇವಾಲಾ A3 ಸೇರಿಂದತೆ 36 ನಾಯಕರ ಮೇಲೆ ಎಫ್​ಐಆರ್ ದಾಖಲಿಸಿದ್ದಾರೆ.
ಅನುಮತಿ ಇಲ್ಲದೆ, ಅಕ್ರಮ ಕೂಟ ಸೇರಿ ಸಂಚಾರಕ್ಕೆ ಅಡ್ಡಪಡಿಸಿ ಪತ್ರಿಭಟನೆ ನಡೆಸಿದ ಆರೋಪ‌ ಹಿನ್ನೆಲೆ ಹೈಗ್ರೌಂಡ್ ಠಾಣೆಯಲ್ಲಿ IPC 143, 341 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!