ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೇಕೆದಾಟು ಪಾದಯಾತ್ರೆಯಲ್ಲಿ ಕೋವಿಡ್ ನಿಯಮ ಉಲ್ಲಂಘಿಸಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಮಾಜಿ ಸಿಎಂ ಸಿದ್ಧರಾಮಯ್ಯ ಸಹಿತ 37 ಕಾಂಗ್ರೆಸ್ ನಾಯಕರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ನಿನ್ನೆಯಿಂದ ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ 2.0 ಪುನರಾರಂಭಿಸಿದ್ದು ರಾಮನಗರದಿಂದಲೇ ನಗಾರಿ ಭಾರಿಸುವ ಆರಂಭವಾದ ಪಾದಯಾತ್ರೆಯಲ್ಲಿ ಕೋವಿಡ್ ನಿಯಮ ಉಲ್ಲಂಘಿದ್ದ ಕಾರಣ ರಾಮನಗರದ ಐಜೂರು ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ಪೊಲೀಸರು ದಾಖಲಿಸಿರುವ ಎಫ್ಐಆರ್ ನಲ್ಲಿ ಎ1 ಆರೋಪಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಎ2 ಸಿದ್ಧರಾಮಯ್ಯ, ಎ3 ಡಿ.ಕೆ ಸುರೇಶ್, ಎ4 ಪರಿಷತ್ ಸದಸ್ಯ ಎಸ್. ರವಿ ಆಗಿದ್ದಾರೆ. ಹೀಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ, ಸಲೀಂ ಅಹಮದ್, ಈಶ್ವರ್ ಖಂಡ್ರೆ, ರಾಮಲಿಂಗಾರೆಡ್ಡಿ, ಮೊಹಮ್ಮದ್ ನಲಪಾಡ್ ಹ್ಯಾರೀಸ್, ಎಂ.ಬಿ ಪಾಟೀಲ್, ಯುಟಿ ಖಾದರ್, ಚಿತ್ರ ನಟರಾದಂತ ಸಾಧುಕೇಕಿಲ್, ನೆನಪಿರಲಿ ಪ್ರೇಮ್ ಸೇರಿದಂತೆ 37 ಮಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ.