ಅಶ್ವಥ್‌ ನಾರಾಯಣ್‌ ವಿರುದ್ಧ ಎಫ್‌ಐಆರ್‌, ಕಾಂಗ್ರೆಸ್ ಸೇಡಿನ ರಾಜಕಾರಣ ಮಾಡುತ್ತಿದೆ: ನಟ ಚೇತನ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಮೈಸೂರು ಜಿಲ್ಲಾ ಕಾಂಗ್ರೆಸ್‌ ಸಮಿತಿಯಿಂದ ಮಾಜಿ ಸಚಿವ ಅಶ್ವಥ್‌ ನಾರಾಯಣ್‌ ವಿರುದ್ಧ ಎಫ್‌ಐಆರ್‌ ದಾಖಲಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್‌ ಬೇಸರ ವ್ಯಕ್ತಪಡಿಸಿದ್ದಾರೆ.

ಈ ಕುರಿತು ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಫೆಬ್ರವರಿಯಲ್ಲಿ ಬಿಜೆಪಿ ಶಾಸಕ ಅಶ್ವತ್ಥನಾರಾಯಣ್‌ ಅವರು, ‘ಟಿಪ್ಪು ಸುಲ್ತಾನ್‌ʼನಂತೆ ಸಿದ್ದರಾಮಯ್ಯನವರನ್ನು ಮುಗಿಸಿ’ ಎಂದು ಬೆಂಕಿ ಹಚ್ಚುವ, ಸ್ವೀಕಾರಾರ್ಹವಲ್ಲದ ಹೇಳಿಕೆ ನೀಡಿದ್ದರು. ನಂತರ ಅವರು ತಮ್ಮ ಮಾತಿಗೆ ವಿಷಾದ ವ್ಯಕ್ತಪಡಿಸಿದರು. ಇದೀಗ ಶಾಸಕರ ಹೇಳಿಕೆಗೆ ಕಾಂಗ್ರೆಸ್ ಎಫ್‌ಐಆರ್ ದಾಖಲಿಸಿದೆ. ಇದು ಕ್ಷುಲ್ಲಕ ಮತ್ತು ಸೇಡಿನ ರಾಜಕಾರಣದಂತೆ ತೋರುತ್ತಿದೆ. ಕಾಂಗ್ರೆಸ್ ಭಾರೀ ಜನಾದೇಶವನ್ನ ಗೆದ್ದಿದೆ—ಈಗ ಅದು ತನ್ನ ಸ್ವಂತ ಅಹಂಕಾರಗಳನ್ನ ಪೂರೈಸುವ ಬದಲು ಕರ್ನಾಟಕದ ಜನರ ಸೇವೆ ಮಾಡಬೇಕು ಎಂದು ಸಲಹೆ ನೀಡಿದ್ದಾರೆ.

ಮೈಸೂರು ಜಿಲ್ಲಾ ಕಾಂಗ್ರೆಸ್‌ ಸಮಿತಿ ಮೇ 24 ರಂದು ಮೈಸೂರಿನ ದೇವರಾಜ ಪೊಲೀಸ್‌ ಠಾಣೆಯಲ್ಲಿ ಬಿಜೆಪಿ ಶಾಸಕ ಅಶ್ವಥ್‌ ನಾರಾಯಣ ಅವರ ವಿರುದ್ಧ ದೂರು ನೀಡಿ, ಎಫ್‌ಐಆರ್‌ ದಾಖಲಾಗಿತ್ತು.

https://twitter.com/ChetanAhimsa/status/1661771592689659908?s=20

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!