ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಂಚರಾಜ್ಯ ಚುನಾವಣೆಯಲ್ಲಿ ಆಯೋಗದ ಮಾರ್ಗಸೂಚಿಗಳ ಉಲ್ಲಂಘನೆಗೆ ಸಂಬಂಧಿಸಿದಂತೆ ಆಮ್ ಆದ್ಮೀ ಪಕ್ಷದ (AAP) ಸಂಘಟಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ವಿರುದ್ಧ ಪ್ರಕರಣ ದಾಖಲಿಸುವಂತೆ ಪಂಜಾಬ್ʼನ ರಾಜ್ಯ ಚುನಾವಣಾ ಆಯೋಗವು ಮೊಹಾಲಿ ಆಡಳಿತಕ್ಕೆ ನಿರ್ದೇಶನ ನೀಡಿದೆ.
ಈ ಕುರಿತು ಶಿರೋಮಣಿ ಅಕಾಲಿ ದಳ (SAD) ದೂರು ದಾಖಲಿಸಿದ ಈ ಹಿನ್ನೆಲೆ ಕ್ರಮ ತೆಗೆದುಕೊಳ್ಳಲಾಗಿದೆ.