ರಾಗಾ ಮೇಲೆ ಅಸ್ಸಾಂನಲ್ಲಿ ಎಫ್‌ಐಆರ್: ಶಾಗೆ ಪತ್ರ ಬರೆದ ಖರ್ಗೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಭಾರತ್ ಜೋಡೋ ನ್ಯಾಯ್ ಯಾತ್ರೆ ವೇಳೆ ಉಂಟಾದ ಗಲಭೆ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪತ್ರ ಬರೆದಿದ್ದಾರೆ.

ಅಗತ್ಯ ಭದ್ರತೆ ಸಿಗುತ್ತಿಲ್ಲ, ಬಿಜೆಪಿ ಕಾರ್ಯಕರ್ತರು ಯಾತ್ರೆ ಮೇಲೆ ದಾಳಿ ನಡೆಸುತ್ತಿದ್ದಾರೆ. ಈ ದಾಳಿ ನಡೆಸುವವರಿಗೆ ಪೊಲೀಸರೇ ರಕ್ಷಣೆ ನೀಡ್ತಿದ್ದಾರೆ. ನೀವು ಮಧ್ಯಪ್ರವೇಶಿಸಬೇಕು ಎಂದು ಖರ್ಗೆ ಬರೆದಿದ್ದಾರೆ.

ಬಿಜೆಪಿ ಕಾರ್ಯಕರ್ತರು ನಮ್ಮ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹಾಗೂ ಭೋಪೇನ್ ಬೋರಾ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಬೆಂಗಾವಲು ಪಡೆಯನ್ನು ತಡೆದಿದ್ದಾರೆ. ಆದರೆ ಪೊಲೀಸರು ಅವರನ್ನೇ ರಕ್ಷಿಸುತ್ತಿದ್ದಾರೆ. ಕೂಡಲೇ ಮಧ್ಯಪ್ರವೇಶಿಸಿ ಭದ್ರತೆ ಒದಗಿಸಬೇಕು ಎಂದು ಮನವಿ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!