ಹೈದರಾಬಾದ್ ಬಿಜೆಪಿ ಕಚೇರಿ ಬಳಿ ಬೆಂಕಿ ಅವಘಡ: ತಪ್ಪಿದ ಅನಾಹುತ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಹೈದರಾಬಾದ್‌ನ ಬಿಜೆಪಿ ರಾಜ್ಯ ಕಚೇರಿ ಬಳಿ ಸಂಭ್ರಮಾಚರಣೆ ವೇಳೆ ಅಗ್ನಿ ಅನಾಹುತ ಸಂಭವಿಸಿದೆ. ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ್ದಕ್ಕೆ ಬಿಜೆಪಿ ಕಚೇರಿ ಬಳಿ ನೂರಾರು ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು. ಈ ವೇಳೆ ಪಟಾಕಿ ಸಿಡಿಸುವಾಗ ಅವಘಡ ಸಂಭವಿಸಿದೆ. ಪಟಾಕಿ ಫ್ಲೆಕ್ಸ್ ಹಾಗೂ ವಿದ್ಯುತ್ ತಂತಿಗಳ ಮೇಲೆ ಬಿದ್ದಿವೆ. ಒಣ ಕಡ್ಡಿ ಮತ್ತು ಉರುವಲು ಇದ್ದ ಕಾರಣ ಬೆಂಕಿಯ ಜ್ವಾಲೆಯು ಮತ್ತಷ್ಟು ಹೆಚ್ಚಿದೆ. ತಕ್ಷಣ ಎಚ್ಚೆತ್ತ ಬಿಜೆಪಿ ಮುಖಂಡರು ಹಾಗೂ ಕಚೇರಿ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

ಘಟನೆಯಿಂದ ವಿದ್ಯುತ್ ತಂತಿಗಳು ಮತ್ತು ಕೇಬಲ್ ತಂತಿಗಳು ಸುಟ್ಟುಹೋಗಿವೆ. ಇದ್ದಕ್ಕಿದ್ದಂತೆ ಸ್ಥಳದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಒಣಗಿದ ಎಲೆಗಳ ಮೇಲೆ ಕಿಡಿಗಳು ಬಿದ್ದಿದ್ದರಿಂದ ಅವಘಡ ಸಂಭವಿಸಿದೆ ಎಂದು ಬಿಜೆಪಿ ಕಾರ್ಯಕರ್ತರು ತಿಳಿಸಿದ್ದಾರೆ. ಈ ಘಟನೆಯಲ್ಲಿ ಯಾರಿಗೂ ತೊಂದರೆಯಾಗದ ಎಲ್ಲರೂ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!