ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೀನುಗಾರಿಕಾ ಬೋಟ್ನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಲಕ್ಷಾಂತರ ರೂಪಾಯಿ ನಷ್ಟವಾಗಿರುವ ಘಟನೆ ಮಂಗಳೂರಿನಲ್ಲಿ ಇಂದು ಮುಂಜಾನೆ ನಡೆದಿದೆ.
ಜಿಲ್ಲೆಯ ಬೆಂಗ್ರೆ ಮೀನುಗಾರಿಕಾ ಬಂದರಿನಲ್ಲಿ ಇಂದು ಈ ಅವಘಡ ಸಂಭವಿಸಿದೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಕದ್ರಿ, ಪಾಂಡೇಶ್ವರ್ ಅಗ್ನಿ ಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಕೈಗೊಂಡಿದ್ದಾರೆ. ಬೋಟ್ ಬೆಂಕಿಗೆ ಆಹುತಿಯಾಗಿದ್ದರಿಂದ ಲಕ್ಷಾಂತರ ಮೌಲ್ಯದ ನಷ್ಟ ಉಂಟಾಗಿದೆ.
ಬೃಹತ್ ಬೆಂಕಿಗೆ ಬಂದರಿನಲ್ಲಿ ಲಂಗರು ಹಾಕಿದ್ದ ಇತರ ಬೋಟ್ಗಳಿಗೆ ಹರಡುವ ಭೀತಿ ಇತ್ತು. ಆದರೆ ಬೆಂಕಿಯ ರಭಸಕ್ಕೆ ದಡದಲ್ಲಿದ್ದ ಬೋಟು ನದಿ ನೀರಿನ ಮಧ್ಯಕ್ಕೆ ಚಲಿಸಿದೆ. ಹೀಗಾಗಿ ಇದರಿಂದಾಗಿ ಇತರ ಬೋಟ್ಗಳಿಗೆ ಬೆಂಕಿ ತಗುಲುವುದು ತಪ್ಪಿದೆ ಎಂದು ಅಗ್ನಿಶಾಮಕ ದಳದ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು. ಈ ಬೆಂಕಿ ಅವಘಡಕ್ಕೆ ಕಾರಣ ಇನ್ನೂ ತಿಳಿದು ಬಂದಿಲ್ಲ.