May 17, 2026
Sunday, May 17, 2026
spot_img

ಎಚ್‌ಪಿಸಿಎಲ್‌ ಸಂಸ್ಕರಣಾಗಾರದಲ್ಲಿ ಅಗ್ನಿ ಅವಘಡ: ನಾಳಿನ ಪ್ರಧಾನಿ ಮೋದಿ ಉದ್ಘಾಟನಾ ಕಾರ್ಯಕ್ರಮ ಮುಂದೂಡಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜಸ್ಥಾನದ ಬಲೋತ್ರಾ ಜಿಲ್ಲೆಯಲ್ಲಿ ನಾಳೆ ಪ್ರಧಾನಿ ಮೋದಿ ಅವರಿಂದ ಉದ್ಘಾಟನೆಗೆ ಸಜ್ಜಾಗಿದ್ದ ಬಹುನಿರೀಕ್ಷಿತ ಭಾರತೀಯ ಸಂಸ್ಕರಣಾಗಾರದಲ್ಲಿ ಏಕಾಏಕಿ ಅಗ್ನಿ ಅವಘಡ ಸಂಭವಿಸಿದ್ದು, ಇದರಿಂದಾಗಿ ಘಟಕದ ಒಂದು ಭಾಗ ಸಂಪೂರ್ಣ ಹಾನಿಯಾಗಿದೆ. ಹೀಗಾಗಿ ಪ್ರಧಾನಿ ಮೋದಿ ಅವರಿಂದ ನಾಳೆ ಉದ್ಘಾಟನೆಯಾಗಬೇಕಿದ್ದ ಎಚ್‌ಪಿಸಿಎಲ್‌ ಸಂಸ್ಕರಣಾಗಾರದ ಕಾರ್ಯಕ್ರಮ ಮುಂದೂಡಲಾಗಿದೆ.

ರಿಫೈನರಿ ಘಟಕದಲ್ಲಿ ಸಂಜೆ ವೇಳೆ ಏಕಾಏಕಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದ್ದು, ಕೂಡಲೇ ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವಲ್ಲಿ ಯಶಸ್ಸಿಯಾಗಿದ್ದಾರೆ.

ಘಟನೆ ಸಮಯದಲ್ಲಿ ಘಟಕದ ಕೆಲ ಭಾಗಗಳಲ್ಲಿ ಹಾನಿ ಉಂಟಾಗಿದ್ದು, ಈ ಹಿನ್ನೆಲೆ ನಾಳಿನ ಉದ್ಘಾಟನಾ ಕಾರ್ಯಕ್ರಮ ಮುಂದೂಡಿಕೆ ಮಾಡಲಾಗಿದೆ ಎಂದು ಕೇಂದ್ರ ಪೆಟ್ರೋಲಿಯಂ ಹಾಗೂ ಗ್ಯಾಸ್ ಸಚಿವಾಲಯ ದೃಢಪಡಿಸಿದೆ. ಶೀಘ್ರದಲ್ಲೇ ಹೊಸ ದಿನಾಂಕವನ್ನು ನಿಗದಿಪಡಿಸಲು ನಿರ್ಧರಿಸಿದ್ದಾರೆ.

ಸದ್ಯ ಅಗ್ನಿ ಅವಘಡದಿಂದ ಯಾವುದೇ ಪ್ರಾಣಾಪಾಯವಾಗಿಲ್ಲ. ಕಾರ್ಮಿಕರು ಸುರಕ್ಷಿತ ಸ್ಥಳಕ್ಕೆ ತೆರಳಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !