ಹೊಸದಿಗಂತ ವರದಿ ವಿಜಯಪುರ :
ಗುಡಿಸಲಿಗೆ ಆಕಸ್ಮಿಕ ಬೆಂಕಿ ತಗುಲಿ ವೃದ್ಧ ದಂಪತಿ ಸಜೀವ ದಹನಗೊಂಡಿರುವ ಹೃದಯವಿದ್ರಾವಕ ಘಟನೆ ಜಿಲ್ಲೆಯ ಚಡಚಣ ಪಟ್ಟಣದ ಹೊರ ವಲಯದಲ್ಲಿ ಶನಿವಾರ ತಡರಾತ್ರಿ ನಡೆದಿದೆ.
ಇಲ್ಲಿನ ಕರೀಮಸಾಬ ಇಮಾಮಸಾಬ ಟಪಾಲ (82), ಸಾಜನಬಿ ಮರೀಮಸಾಬ ಟಪಾಲ (75) ಸಾವಿಗೀಡಾದ ದುರ್ದೈವಿ ದಂಪತಿ.
ಈ ದಂಪತಿ ಗುಡಿಸಿಲಿನಲ್ಲಿ ಮಲಗಿದ್ದ ವೇಳೆ ಚಿಮಣಿಯಿಂದ ಬೆಂಕಿ ಹೊತ್ತಿಕೊಂಡಿದ್ದು, ಈ ಅವಘಡದಲ್ಲಿ ವೃದ್ಧ ದಂಪತಿ ಸಜೀವ ದಹನವಾಗಿದ್ದಾರೆ.