ಒಂದೇ ಕುಟುಂಬದ ನಾಲ್ವರು ಅಪ್ರಾಪ್ತ ಬಾಲಕಿಯರು ಸಜೀವ ದಹನ: ಏಳು ಜನರ ಸ್ಥಿತಿ ಗಂಭೀರ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಬಿಹಾರದ ಮುಜಾಫರ್‌ಪುರ ಜಿಲ್ಲೆಯ ರಾಮದಯಾಲು ರೈಲು ನಿಲ್ದಾಣದ ಬಳಿಯ ಜುಗ್ಗಿ ಕ್ಲಸ್ಟರ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಒಂದೇ ಕುಟುಂಬದ ನಾಲ್ವರು ಅಪ್ರಾಪ್ತ ಬಾಲಕಿಯರು ಸಜೀವ ದಹನವಾಗಿದ್ದಾರೆ. ಮೇ 1 ರಂದು ರಾತ್ರಿ ಸಂಭವಿಸಿದ ಬೆಂಕಿಯಲ್ಲಿ ಸುಟ್ಟ ಗಾಯಗಳಿಂದ ಇತರ ಏಳು ಮಂದಿ ಜಿಲ್ಲೆಯ ಶ್ರೀ ಕೃಷ್ಣ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ (SKMCH) ಚಿಕಿತ್ಸೆ ಪಡೆಯುತ್ತಿದ್ದಾರೆ, ಅವರ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಬೆಂಕಿ ಅನಾಹುತಕ್ಕೆ ನಿಖರವಾದ ಕಾರಣವನ್ನು ಇಲ್ಲಿಯವರೆಗೆ ಕಂಡುಹಿಡಿಯಲಾಗಲಿಲ್ಲ. ಬೆಂಕಿಯಲ್ಲಿ ಮೃತಪಟ್ಟ ನಾಲ್ವರು ಬಾಲಕಿಯರು ಮೂರರಿಂದ 12 ವರ್ಷದೊಳಗಿನವರಾಗಿದ್ದು, ನರೇಶ್ ರಾಮ್ ಎಂಬ ವ್ಯಕ್ತಿಯ ಪುತ್ರಿಯರೆಂದು ಗುರುತಿಸಲಾಗಿದೆ.

ಮುಶಾರಿ (ಮುಜಾಫರ್‌ಪುರ) ವೃತ್ತದ ಅಧಿಕಾರಿ ಸುಧಾಂಶು ಶೇಖರ್ ಮಾತನಾಡಿ, ಸೋಮವಾರ ರಾತ್ರಿ 10.30 ರ ಸುಮಾರಿಗೆ ಜುಗ್ಗಿಯಲ್ಲಿ ಈ ಘಟನೆ ನಡೆದಿದೆ. ಬೆಂಕಿ ವೇಗವಾಗಿ ವ್ಯಾಪಿಸಿದ್ದು, ಕೂಡಲೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಯಿತು. ಸ್ವಲ್ಪ ಸಮಯದ ನಂತರ ಬೆಂಕಿಯನ್ನು ಹತೋಟಿಗೆ ತರಲಾಯಿತು ಎಂದರು.

ಗಾಯಾಳುಗಳು ಸೇರಿದಂತೆ ಸಂತ್ರಸ್ತರ ಸಂಬಂಧಿಕರಿಗೆ ₹ 4 ಲಕ್ಷ ಪರಿಹಾರ ನೀಡುವುದಾಗಿ ಸರ್ಕಾರ ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!