Saturday, April 1, 2023

Latest Posts

ಕಾರಿಗೆ ಬೆಂಕಿ : ಕಾರಿನಲ್ಲಿದ್ದ ಇಬ್ಬರು ಪ್ರಾಣಾಪಾಯದಿಂದ ಪಾರು

ಹೊಸದಿಗಂತ ವರದಿ ಕೊಪ್ಪಳ :

ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕಾರಿನಲ್ಲಿದ್ದ ಇಬ್ಬರು ಪ್ರಾಣಾಪಾಯದಿಂದ ಪಾರಾದ ಘಟನೆ ನಗರದ ಗಂಜ್ ಸರ್ಕಲ್ ಬಳಿ ನಡೆದಿದೆ.

ಕಿನ್ನಾಳ ಗ್ರಾಮದಲ್ಲಿ ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಡಸ್ಟರ್ ಕಾರಿ ನಲ್ಲಿ ಇಬ್ಬರು ಶುಕ್ರವಾರ ಹೊಸಪೇಟೆ ಯಿಂದ ಹೊರಟಿದ್ದಾರೆ. ಕೊಪ್ಪಳ ನಗರದ ಗಂಜ್ ಸರ್ಕಲ್ ಬಳಿ ಬರುತ್ತಿದ್ದಂತೆ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಬೆಂಕಿ ಕಾಣಿಸಿಕೊಂಡಿರುವುದನ್ನು ಗಮನಿಸಿದ ಚಾಲಕ ಹಾಗೂ ಮತ್ತೊಮ್ಮ ವ್ಯಕ್ತಿ ಎಚ್ಚತ್ತು ಕಾರಿನಿಂದ ಹೊರ ಇಳಿದಿದ್ದಾರೆ. ಅಗ್ನಿ ಶಾಮಕ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದ್ದಾರೆ. ಕೊಪ್ಪಳ ನಗರ ಸಂಚಾರಿ‌ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!