ರಾಸಾಯನಿಕ ಕಾರ್ಖಾನೆಯಲ್ಲಿ ಮುಗಿಲೆತ್ತರಕ್ಕೆ ಬೆಂಕಿ; ಹಲವರು ಸಿಲುಕಿರುವ ಶಂಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಉತ್ತರಾಖಂಡದ ಹರಿದ್ವಾರದಲ್ಲಿ ರಾಸಾಯನಿಕ ಕಾರ್ಖಾನೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಬೆಂಕಿಯ ಜ್ವಾಲೆ ಮುಗಿಲೆತ್ತರಕ್ಕೆ ಹಬ್ಬಿದೆ.

ಜಿಲ್ಲೆಯ ಇಬ್ರಾಹಿಂಪುರ ಗ್ರಾಮದಲ್ಲಿರುವ ಕಾರ್ಖಾನೆಯಲ್ಲಿ ಈ ಘಟನೆ ನಡೆದಿದೆ. ಘಟನೆಯ ನಂತರ, ಪೊಲೀಸರು ಮತ್ತು ಅಗ್ನಿಶಾಮಕ ದಳದ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸುವಲ್ಲಿ ಭಾಗಶಃ ಯಶಸ್ವಿಯಾಗಿದ್ದಾರೆ.

ಹಲವರು ಕಾರ್ಖಾನೆಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಬೆಂಕಿಯ ತೀವ್ರತೆ ಹಾಗೂ ದಟ್ಟ ಹೊಗೆಯು ರಕ್ಷಣಾ ಕಾರ್ಯಾಚರಣೆಗೆ ಸವಾಲಾಗಿ ಪರಿಣಮಿಸಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!