ಹೊಸದಿಗಂತ ಡಿಜಿಟಲ್ ಡೆಸ್ಕ್:
ಹೈದರಾಬಾದ್, ಕುಕಟ್ ಪಲ್ಲಿಯ ಜೆಎನ್ಟಿಯು ಮೆಟ್ರೋ ನಿಲ್ದಾಣದಲ್ಲಿ ತಡರಾತ್ರಿ ಬೆಂಕಿ ಅವಘಡ ಸಂಭವಿಸಿದೆ. ಖಾಸಗಿ ಟ್ರಾವೆಲ್ಸ್ ಕಾವೇರಿ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬಸ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಬಸ್ಸಿನಲ್ಲಿದ್ದ ಪ್ರಯಾಣಿಕರು ಸುರಕ್ಷಿತವಾಗಿ ಕೆಳಗಿಳಿದಿದ್ದರಿಂದ ಭಾರೀ ಅನಾಹುತ ತಪ್ಪಿದೆ.
ಘಟನೆ ಬಗ್ಗೆ ಮಾಹಿತಿ ಪಡೆದ ಅಗ್ನಿಶಾಮಕ ದಳ ತಕ್ಷಣ ಸ್ಥಳಕ್ಕೆ ದೌಡಾಯಿಸಿ ಬೆಂಕಿಯನ್ನು ನಂದಿಸಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಡ್ರೈವರ್ ಕೂಡಲೇ ಪ್ರಯಾಣಿಕರಿಗೆ ಮಾಹಿತಿ ನೀಡಲಾಗಿದ್ದು, ಎಲ್ಲರೂ ಕೆಳಗಿಳಿದಿದ್ದಾರೆ. ಇದರಿಂದ ದೊಡ್ಡ ಅಪಾಯ ತಪ್ಪಿದೆ. ನೋಡನೋಡುತ್ತಿದ್ದಂತೆಯೇ.. ಬೆಂಕಿ ಬಸ್ಸಿನ ತುಂಬ ವ್ಯಾಪಿಸಿ ಬಸ್ಸು ಸುಟ್ಟು ಕರಕಲಾಗಿದೆ.
ಕಣ್ಣೆದುರೇ ಬಸ್ಸಿಗೆ ಬೆಂಕಿ ಹತ್ತಿಕೊಂಡಿದ್ದು, ಧಗಧಗನೆ ಹೊತ್ತಿ ಉರಿಯುತ್ತಿರುವ ಬಸ್ ನೋಡಿ ಪ್ರಯಾಣಿಕರು ಬೆಚ್ಚಿಬಿದ್ದರು. ಬಸ್ನಲ್ಲಿ ಬೆಂಕಿ ಹೊತ್ತಿಕೊಳ್ಳಲು ಕಾರಣಗಳು ಇನ್ನಷ್ಟೇ ತಿಳಿಯಬೇಕಿದೆ.