ಹೊಸದಿಗಂತ ಡಿಜಿಟಲ್ ಡೆಸ್ಕ್:
ತಿರುಪತಿ ಜಿಲ್ಲೆಯ ರೇಣಿಗುಂಟದಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಈ ಘಟನೆಯಲ್ಲಿ ಇಬ್ಬರು ಮಕ್ಕಳು ಸೇರಿ ಓರ್ವ ವೈದ್ಯ ಪ್ರಾಣ ಕಳೆದುಕೊಂಡಿದ್ದಾರೆ. ರೇಣಿಗುಂಟದ ಬಿಸ್ಮಿಲ್ಲಾ ನಗರದ ಕಾರ್ತಿಕಾ ಕ್ಲಿನಿಕ್ ನಲ್ಲಿ ಬೆಂಕಿ ಕಾಣಿಸಿಕೊಂಡು, ಭಾರೀ ಪ್ರಮಾಣದಲ್ಲಿ ಆಸ್ಪತ್ರೆಯಾದ್ಯಂತ ಪಸರಿಸಿದೆ.
ಅವಘಡದ ವೇಳೆ ಆಸ್ಪತ್ರೆಯಲ್ಲಿ ಇಬ್ಬರು ಮಹಿಳೆಯರು ಮತ್ತು ಇಬ್ಬರು ಮಕ್ಕಳು ಹಾಗೂ ಒಬ್ಬ ವೈದ್ಯ ಇದ್ದರು ಎಂದು ತಿಳಿದುಬಂದಿದೆ. ಉಸಿರುಗಟ್ಟಿ ಇಬ್ಬರು ಮಕ್ಕಳು ಸಾವನ್ನಪ್ಪಿದ್ದ, ಇಬ್ಬರು ಮಹಿಳೆಯರನ್ನು ರಕ್ಷಣಾ ತಂಡ ರಕ್ಷಿಸಿದೆ. ವೈದ್ಯ ಡಾ.ರವಿಶಂಕರ್ ರೆಡ್ಡಿಯನ್ನು ರಕ್ಷಿಸುವಷ್ಟರಲ್ಲಿ ಆತನೂ ಸಾವಿಗೀಡಾಗಿರುವುದಾಗಿ ಪೊಲೀಸರು ಬಹಿರಂಗಪಡಿಸಿದರು.
ಘಟನೆಯಲ್ಲಿ ಮೃತಪಟ್ಟ ಮಕ್ಕಳ ಮೃತದೇಹಗಳನ್ನು ಹೊರತೆಗೆಯಲಾಗಿದೆ. ಮಕ್ಕಳನ್ನು ಸಿದ್ಧಾರ್ಥ ರೆಡ್ಡಿ ಮತ್ತು ಕಾರ್ತಿಕೇಯ ಎಂದು ಗುರುತಿಸಲಾಗಿದೆ. ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.