ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾ ಪಶ್ಚಿಮದ ಶಹಬೇರಿ ಪ್ರದೇಶದ ಕಟ್ಟಡವೊಂದರಲ್ಲಿ ಶನಿವಾರ ಭಾರಿ ಬೆಂಕಿ ಅವಘಡ ಸಂಭವಿಸಿದೆ. ಬೆಂಕಿ ನಂದಿಸಲು ಸುಮಾರು 12 ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳ ಸಿಬ್ಬಂದಿ ಶ್ರಮಿಸಿದರು. ಜಂಟಿ ಪೊಲೀಸ್ ಕಮಿಷನರ್ ರವಿಶಂಕರ್ ಛಬಿ ಅವರ ಪ್ರಕಾರ, ಶಹಬೇರಿಯ ಕಟ್ಟಡದ ನೆಲಮಾಳಿಗೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ, ಅಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ಹೆಚ್ಚುವರಿ ಆಯುಕ್ತರು ಸಹ ತಲುಪಿ ಪರಿಸ್ಥಿತಿ ಹತೋಟಿಗೆ ತಂದರು ಎಂಬ ಮಾಹಿತಿ ನೀಡಿದರು.
ಪೊಲೀಸರು ಮತ್ತು ಅಗ್ನಿಶಾಮಕ ಅಧಿಕಾರಿಗಳು ಸ್ಥಳಕ್ಕೆ ತಲುಪಿ ಕಟ್ಟಡದಲ್ಲಿದ್ದ 24ಮಂದಿಯನ್ನು ರಕ್ಷಿಸಿದ್ದಾರೆ. ಸದ್ಯ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದರು.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.