ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ ಘಟನೆ ಉತ್ತರ ಪ್ರದೇಶದ ಕೌಶಂಬಿಯಲ್ಲಿ ನಡೆದಿದೆ. ಜಿಲ್ಲೆಯ ಕೊಖ್ರಾಜ್ ಪೊಲೀಸ್ ಠಾಣೆ ವ್ಯಾಪ್ತಿಯ ಶರಾಫತ್ ಅಲಿ ಭಾರ್ವಾರಿ ಪಟ್ಟಣದಲ್ಲಿ ಈ ಘಟನೆ ನಡೆದಿದೆ.
ಸ್ಥಳೀಯರ ಪ್ರಕಾರ, ಮದುವೆ ಸಮಾರಂಭಗಳಿಗೆ ಇಲ್ಲಿ ಪಟಾಕಿಗಳನ್ನು ತಯಾರಿಸಲಾಗುತ್ತದೆ ಎನ್ನಲಾಗಿದೆ. ಈ ಘಟನೆಯಲ್ಲಿ ಐವರು ಸಾವನ್ನಪ್ಪಿದ್ದಾರೆ. ಈ ಘಟನೆಯ ಬಗ್ಗೆ ಮಾಹಿತಿ ಪಡೆದ ತಕ್ಷಣ ಭದ್ರತಾ ಪಡೆಗಳು ಮತ್ತು ಅನೇಕ ಪೊಲೀಸ್ ಠಾಣೆಗಳ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ.
ಎಸ್ಪಿ ಬ್ರಿಜೇಶ್ ಶ್ರೀವಾಸ್ತವ ಸೇರಿದಂತೆ ಹಲವು ಪೊಲೀಸ್ ಠಾಣೆಗಳ ಪಡೆಗಳು ಸ್ಥಳದಲ್ಲಿವೆ. ಸಿಎಂ ಯೋಗಿ ಆದಿತ್ಯನಾಥ್ ಕೂಡ ಘಟನೆಯ ಬಗ್ಗೆ ಮಾಹಿತಿ ಪಡೆಡಿದ್ದಾರೆ. ಮೃತರ ಕುಟುಂಬಕ್ಕೆ ಸಿಎಂ ಯೋಗಿ ಸಾಂತ್ವನ ಹೇಳಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿ ಪರಿಹಾರ ಕಾರ್ಯಗಳನ್ನು ಚುರುಕುಗೊಳಿಸುವಂತೆ ಸಿಎಂ ಯೋಗಿ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.