ಬಟಿಂಡಾ ಸೇನಾ ನೆಲೆ ಮೇಲೆ ದಾಳಿ: ಮತ್ತೊಬ್ಬ ಯೋಧ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಪಂಜಾಬ್‌ನ ಬಟಿಂಡಾ ಸೇನಾ ನೆಲೆಯಲ್ಲಿ ಗುಂಡೇಟಿನ ಗಾಯದಿಂದ ಮತ್ತೊಬ್ಬ ಯೋಧ ಮೃತಪಟ್ಟಿದ್ದಾನೆ ಎಂದು ಭಾರತೀಯ ಸೇನೆ ಹೇಳಿದೆ.

ಆದರೆ ಈ ಘಟನೆಗೂ ಬುಧವಾರ ನಡೆದ ಗುಂಡಿನ ದಾಳಿಗೂ ಯಾವುದೇ ಸಂಬಂಧವಿಲ್ಲ. ಯೋಧ ಆತ್ಮಹತ್ಯೆ ಮಾಡಿರಬಹುದು ಅಥವಾ ಆಕಸ್ಮಿಕವಾಗಿ ಗುಂಡು ಹಾರಿರಬಹುದು ಎಂದು ಸೇನೆ ತಿಳಿಸಿದೆ. ಮೃತ ಯೋಧನನ್ನು ಲಾಘು ರಾಜ್ ಶಂಕರ್ ಎಂದು ಗುರುತಿಸಲಾಗಿದೆ.

ನಿನ್ನೆ (ಏ.12) ಸಂಜೆ 4.30ಕ್ಕೆ ಕಾವಲು ಯೋಧ ಗುಂಡೇಟಿನ ಗಾಯದಿಂದ ಮೃತಪಟ್ಟಿದ್ದಾರೆ. ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಯೋಧನ ಸಮೀಪದಲ್ಲೇ ಪಿಸ್ತೂಲ್ ಹಾಗೂ ಕಾರ್ಟ್ರಿಡ್ಜ್ ಕೇಸ್ ಪತ್ತೆಯಾಗಿದೆ ಎಂದು ಸೇನಾ ಪ್ರಕಟಣೆಯಲ್ಲಿ ಹೇಳಿದೆ. ಘಟನೆಯ ಸಂಬಂಧ ತನಿಖೆ ಆರಂಭಿಸಲಾಗಿದೆ.

ಪಂಜಾಬ್​ನ ಬಟಿಂಡಾದಲ್ಲಿರುವ ಸೇನಾ ನೆಲೆಯ ಮೇಲೆ ಇಬ್ಬರು ಮುಸುಕುಧಾರಿಗಳು ಗುಂಡಿನ ಸುರಿಮಳೆ ಗೈದಿದ್ದರು. ಇದರಿಂದ ನಾಲ್ವರು ಯೋಧರು ಪ್ರಾಣ ಕಳೆದುಕೊಂಡಿದ್ದರು. ಈಗ ಇನ್ನೊಬ್ಬ ಯೋಧ ಸಾವನ್ನಪ್ಪಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!