ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಿಲ್ಲೆಯ ಕಡ್ಲಾ ಗ್ರಾಮದಲ್ಲಿ ಪೊಲೀಸರು ಮತ್ತು ನಕ್ಸಲರ ನಡುವೆ ನಡೆದ ಗುಂಡಿನ ದಾಳಿಯಲ್ಲಿ ಮಹಿಳೆ ಸೇರಿದಂತೆ ಮೂವರು ನಕ್ಸಲರು ಹತರಾಗಿದ್ದಾರೆ.
ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಗುಂಡಿನ ದಾಳಿ ಬಗ್ಗೆ ಮಾಹಿತಿ ಹಂಚಿಕೊಂಡಿದ್ದು, ಹತರಾದ ನಕ್ಸಲರನ್ನು ಅವರ ವಿಭಾಗೀಯ ಸಮಿತಿ ಸದಸ್ಯ ನಾಗೇಶ್ ಎಂದು ಗುರುತಿಸಲಾಗಿದೆ ಹಾಗೆ ಕಮಾಂಡರ್ಗಳಾದ ಮನೋಜ್ ಮತ್ತು ಮಹಿಳೆ ರಮೆರನ್ನು ಸಹ ಹೊಡೆದುರುಳಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಚೌಹಾಣ್ ಅವರು ಪೊಲೀಸ್ ಅಧಿಕಾರಿಗಳ ಶೌರ್ಯವನ್ನು ಶ್ಲಾಘಿಸಿದ್ದು, ಅವರಿಗೆ ಬಡ್ತಿ ಮತ್ತು ಶೌರ್ಯ ಪ್ರಶಸ್ತಿಗಳನ್ನು ನೀಡಲಾಗುವುದು ಎಂದು ಹೇಳಿದ್ದಾರೆ. ನಕ್ಸಲರಿಂದ ಎಕೆ-47, .303 ರೈಫಲ್ ಮತ್ತು 12-ಬೋರ್ ಆ್ಯಕ್ಷನ್ ಗನ್ ವಶಪಡಿಸಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.
बालाघाट जिले के बहेला थाना इलाके में पुलिस-नक्सली मुठभेड़ में 3 इनामी नक्सली मारे गए हैं।
हॉक फोर्स ने मुठभेड़ में नक्सलियों के डिवीजनल कमेटी के मेंबर और 15 लाख के इनामी नक्सली नागेश और 8-8 लाख के इनामी एरिया कमांडर नक्सली मनोज और रामे को ढेर किया है।
पूरी पुलिस टीम को बधाई। pic.twitter.com/jeO7Cw6HhQ
— Dr Narottam Mishra (@drnarottammisra) June 20, 2022