ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಹುತೇಕ ಸಿದ್ಧಗೊಂಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ನನ್ನ ಅಧ್ಯಕ್ಷತೆಯಲ್ಲಿ ಒಳ ಒಪ್ಪಂದಕ್ಕೆ ಅವಕಾಶ ನೀಡಲ್ಲ. ಕಾಂಗ್ರೆಸ್ ಪಕ್ಷದಲ್ಲಿ ನೋ ಮ್ಯಾಚ್ ಫಿಕ್ಸಿಂಗ್. ಟಿಕೆಟ್ಗಾಗಿ ಪಕ್ಷದಲ್ಲಿ ಬಣಗಳ ಕಿತ್ತಾಟ ನಡೆದಿಲ್ಲ ಎಂದರು.
ಅಲ್ಲದೆ ಹಾಲಿ ಶಾಸಕರ ಪೈಕಿ ಶೇ. ೯೫ ಮಂದಿ ಟಿಕೆಟ್ ಪಡೆಯಲಿದ್ದಾರೆ ಎಂದರು.
ಇನ್ನು ಆಪರೇಷನ್ ಕಮಲಕ್ಕೆ ಗುರಿಯಾಗಿ ಬಿಜೆಪಿಗೆ ಹೋದವರ ಮರು ಸೇರ್ಪಡೆ ವಿಚಾರದ ಬಗ್ಗೆ ಪ್ರಸ್ತಾಪಿಸಿದಾಗ, ರಾಜಕೀಯದಲ್ಲಿ ಏನು ಬೇಕಾದರೂ ನಡೆಯಬಹುದು. ಆದರೆ, ಅವರು ಯಾರು ಇದುವರೆಗೆ ಅರ್ಜಿ ಸಲ್ಲಿಸಿಲ್ಲ ಎನ್ನೋದೂ ಸತ್ಯ. ಅರ್ಜಿ ಕೊಟ್ಟ ಮೇಲೆ ಹೇಳ್ತೇನೆ ಎಂದು ಹೇಳಿದರು.