ಹೊಸದಿಗಂತ ವರದಿ ಮಡಿಕೇರಿ:
ಮುಂಬರುವ ವಿಧನಾಸಭಾ ಚುನಾವಣೆಗೆ ಸಂಬಂಧಿಸಿದಂತೆ 124ಕ್ಷೇತ್ರಗಳ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಕಾಂಗ್ರೆಸ್ ಶನಿವಾರ ಬಿಡುಗಡೆ ಮಾಡಿದ್ದು, ಅದರಂತೆ ಕೊಡಗಿನ ವೀರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಎ.ಎಸ್. ಪೊನ್ನಣ್ಣ ಅವರ ಹೆಸರನ್ನು ಪ್ರಕಟಿಸಿದೆ.
ಕೇವಲ ಎರಡು ವಿಧಾನಸಭಾ ಕ್ಷೇತ್ರಗಳಿರುವ ಕೊಡಗು ಜಿಲ್ಲೆಯ ಒಂದು ಕ್ಷೇತ್ರದ ಅಭ್ಯರ್ಥಿಯನ್ನು ಮಾತ್ರ ಅಂತಿಮಗೊಳಿಸಲಾಗಿದ್ದು, ಮಡಿಕೇರಿ ಕ್ಷೇತ್ರಕ್ಕೆ ಯಾರು ಎಂಬ ಪ್ರಶ್ನೆ ಪ್ರಶ್ನೆಯಾಗಿಯೇ ಉಳಿದಿದೆ.
ಮಡಿಕೇರಿ ವಿಧಾನಸಭಾ ಕ್ಷೇತ್ರದಿಂದ ಮಾಜಿ ಸಚಿವ ಬಿ.ಎ.ಜೀವಿಜಯ, ಡಾ. ಮಂಥರ್ ಗೌಡ ಹಾಗೂ ಹೆಚ್.ಎಸ್.ಚಂದ್ರಮೌಳಿ ಅವರುಗಳ ಹೆಸರು ಮಚೂಣಿಯಲ್ಲಿದ್ದು, ಅಂತಿಮವಾಗಿ ಹೈಕಮಾಂಡ್ ಯಾರಿಗೆ ಮಣೆ ಹಾಕಲಿದೆ ಎಂಬ ಕುತೂಹಲ ಮೂಡಿದೆ.
ಇತ್ತ ವೀರಾಜಪೇಟೆ ಕ್ಷೇತ್ರದಲ್ಲಿ ಎ.ಎಸ್.ಪೊನ್ನಣ್ಣ ಅವರು ಈಗಾಗಲೇ ಬಿರುಸಿನ ಪ್ರಚಾರ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದು, ಮತದಾರರ ಗಮನಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಕೆಪಿಸಿಸಿಯ ಕಾನೂನು ಘಟಕದ ಅಧ್ಯಕ್ಷರೂ ಆಗಿರುವ ಪೊನ್ನಣ್ಣ ಅವರು ಹೈಕೋರ್ಟ್ ವಕೀಲರೂ ಆಗಿದ್ದಾರೆ.