ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಪಿಎಲ್ ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ 7 ವಿಕೆಟ್ ನಷ್ಟಕ್ಕೆ 172 ರನ್ ಸಿಡಿಸಿದೆ.
ಗುಜರಾತ್ ಟೈಟಾನ್ಸ್ ಬೌಲಿಂಗ್ ದಾಳಿಗೆ ಆರಂಭಿಕರಾದ ರುತುರಾಜ್ ಗಾಯಕ್ವಾಡ್ ಹಾಗೂ ಡೇವೋನ್ ಕಾನ್ವೇ ದಿಟ್ಟ ಹೋರಾಟ ನೀಡಿದರೆ, ಇತರರಿಂದ ರನ್ ಹರಿದು ಬರಲಿಲ್ಲ. ಆದರೆ ಅಂತಿಮ ಹಂತದಲ್ಲಿ ರವೀಂದ್ರ ಜಡೇಜಾ ಬ್ಯಾಟಿಂಗ್ನಿಂದ ಚೆನ್ನೈ ಸ್ಪರ್ಧಾತ್ಮಕ ಮೊತ್ತ ಪೇರಿಸಿತು.
ರುತುರಾಜ್ ಆಕರ್ಷಕ ಹಾಫ್ ಸೆಂಚುರಿ ಸಿಡಿಸಿ ಮಿಂಚಿದರು. ಅ. 44 ಎಸೆತದಲ್ಲಿ 60 ರನ್ ಸಿಡಿಸಿ ರುತುರಾಜ್ ನಿರ್ಗಮಿಸಿದರು. ಮೊದಲ ವಿಕೆಟ್ಗೆ ರುತುರಾಜ್ ಹಾಗೂ ಡೇವೊನ್ 87 ರನ್ ಜೊತೆಯಾಟ ನೀಡಿದರು.
ಗಾಯಕ್ವಾಡ್ ಬೆನ್ನಲ್ಲೇ ಶಿವಂ ದುಬೆ ವಿಕೆಟ್ ಪತನಗೊಂಡಿತು.. ಅಜಿಂಕ್ಯ ರಹಾನೆ ಆಟ 17 ರನ್ಗೆ ಅಂತ್ಯವಾಯಿತು. ಇತ್ತ ಡೇವೇನ್ ಕಾನ್ವೇ 34 ಎಸೆತದಲ್ಲಿ 40 ರನ್ ಸಿಡಿಸಿ ಔಟಾದರು. ಅಂಬಾಟಿ ರಾಯುಡು 9 ಎಸೆತದಲ್ಲಿ 17 ರನ್ ಸಿಡಿಸಿ ಔಟಾದರು. ರವೀಂದ್ರ ಜಡೇಜಾ ಹೋರಾಟ ನೀಡುವ ಸೂಚನೆ ನೀಡಿದರು. ಇತ್ತ ನಾಯಕ ಎಂ.ಎಸ್ ಧೋನಿ ಕೇವಲ 1 ರನ್ ಸಿಡಿಸಿ ನಿರ್ಗಮಿಸಿದರು.
ರವೀಂದ್ರ ಜಡೇದಾ 16 ಎಸೆತದಲ್ಲಿ 22 ರನ್ ಸಿಡಿಸಿದರು. ಇತ್ತ ಮೊಯಿನ್ ಆಲಿ ಅಜೇಯ 9 ರನ್ ಸಿಡಿಸಿದರು. ಈ ಮೂಲಕ ಸಿಎಸ್ಕೆ 7 ವಿಕೆಟ್ ನಷ್ಟಕ್ಕೆ 172 ರನ್ ಸಿಡಿಸಿತು.