ರಾಜಸ್ಥಾನ: ಗ್ಯಾಂಗ್ ಸ್ಟರ್‌ನನ್ನು ಗುಂಡಿಕ್ಕಿ ಹತ್ಯೆಗೈದ ಐವರು ಹಂತಕರು ಪೊಲೀಸರ ಬಲೆಗೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ರಾಜಸ್ಥಾನದ ಸಿಕರ್ ಜಿಲ್ಲೆಯಲ್ಲಿ ಶನಿವಾರ ಗ್ಯಾಂಗ್‌ಸ್ಟರ್ ರಾಜು ಥೇಟ್ ಮತ್ತು ಮತ್ತೊಬ್ಬ ವ್ಯಕ್ತಿಯನ್ನು ಹತ್ಯೆಗೈದು ಪರಾರಿಯಾಗಿದ್ದ ಐವರನ್ನು ಬಂಧಿಸಲಾಗಿದೆ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಭಾನುವಾರ ತಿಳಿಸಿದ್ದಾರೆ.
ಅರೋಪಿಗಳನ್ನು ಹಿಡಿಯಲು ಪೊಲೀಸರು ನಡೆಸಿದ ಎನ್‌ಕೌಂಟರ್ ನಲ್ಲಿ ಇಬ್ಬರು ಗಾಯಗೊಂಡಿದ್ದು ನಂತರ ಅವರನ್ನು ಹಿಡಿಯಲಾಯಿತು.
ಹಂತಕರ ಗುಂಡಿಗೆ ಬಲಿಯಾದ ಥೇಟ್ ಮೋಸ್ಟ್‌ ವಾಂಟೆಡ್ ದರೋಡೆಕೋರನಾಗಿದ್ದ. ಅವನ ಜೊತೆಗೆ ತಾರಾಚಂದ್ ಕಡ್ವಾಸರ ಎಂದು ಗುರುತಿಸಲ್ಪಟ್ಟ ವ್ಯಕ್ತಿಯೊಬ್ಬರು ಅಲ್ಲಿನ ಕೋಚಿಂಗ್ ಇನ್‌ಸ್ಟಿಟ್ಯೂಟ್‌ನಲ್ಲಿ ಓದುತ್ತಿರುವ ತನ್ನ ಮಗಳನ್ನು ಭೇಟಿಯಾಗಲು ಹೋಗಿದ್ದ ವೇಳೆ ಗುಂಡು ತಗುಲಿ ಸಾವನ್ನಪ್ಪಿದ್ದಾರೆ. ಆರೋಪಿಗಳು ಆತ ಅವರ ಆಪ್ತ ಎಂದು ಭಾವಿಸಿ ಅವರ ಮೇಲೆ ಗುಂಡು ಹಾರಿಸಿದ್ದರು.
30 ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳನ್ನು ಹೊಂದಿದ್ದ ಥೇತ್ ಜೂನ್ 2017 ರಲ್ಲಿ ಪೊಲೀಸ್ ಎನ್‌ಕೌಂಟರ್‌ನಲ್ಲಿ ಕೊಂದಿದ್ದ ಭೀಕರ ಕ್ರಿಮಿನಲ್ ಆನಂದಪಾಲ್ ಸಿಂಗ್‌ನೊಂದಿಗೆ ಪೈಪೋಟಿ ನಡೆಸುತ್ತಿದ್ದ. ಜಾಮೀನಿನ ಮೇಲೆ ಜೈಲಿನಿಂದ ಹೊರಬಂದು ಐಷಾರಾಮಿ ಜೀವನ ನಡೆಸುತ್ತಿದ್ದ ಮತ್ತು ರಾಜಕೀಯ ಮಹತ್ವಾಕಾಂಕ್ಷೆಗಳನ್ನು ಹೊಂದಿದ್ದ.
ಸಿಕರ್ ನಿವಾಸಿಗಳಾದ ಮನೀಶ್ ಜಾಟ್ ಮತ್ತು ವಿಕ್ರಮ್ ಗುರ್ಜರ್ ಮತ್ತು ಹರಿಯಾಣದ ಸತೀಶ್ ಕುಮಾರ್, ಜತಿನ್ ಮೇಘವಾಲ್ ಮತ್ತು ನವೀನ್ ಮೇಘವಾಲ್ ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಉಮೇಶ್ ಮಿಶ್ರಾ ಜೈಪುರದಲ್ಲಿ ತಿಳಿಸಿದ್ದಾರೆ. ಆರೋಪಿಯನ್ನು ಹಿಡಿದ ಪೊಲೀಸ್ ಸಿಬ್ಬಂದಿಗೆ ಬಹುಮಾನ ನೀಡಲಾಗುವುದು ಎಂದು ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!