ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ ಯಾತ್ರೆಗೆ ಐದು ದಿನಗಳ ವಿರಾಮ ನೀಡಲಾಗಿದೆ.
ಮಾರ್ಚ್ 5 ರಿಂದ ಮತ್ತೆ ಯಾತ್ರೆ ಆರಂಭವಾಗಲಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ.
ದೆಹಲಿಯಲ್ಲಿ ಚುನಾವಣೆಗೆ ಸಂಬಂಧಿಸಿದ ಸಭೆಗಳಿದ್ದು, ರಾಹುಲ್ ಗಾಂಧಿ ಸಭೆಯಲ್ಲಿ ಭಾಗಿಯಾಗಬೇಕಿದೆ. ಈ ಕಾರಣದಿಂದ ಭಾರತ್ ಜೋಡೋ ನ್ಯಾಯ್ ಯಾತ್ರೆಗೆ ತಾತ್ಕಾಲಿಕ ತಡೆ ನೀಡಲಾಗಿದೆ.