ACCIDENT | ಧಾರವಾಡ, ಶಿವಮೊಗ್ಗದಲ್ಲಿ ಭೀಕರ ಅಪಘಾತ: ಐವರ ದುರ್ಮರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಧಾರವಾಡ  ಜಿಲ್ಲೆಯ ಅಳ್ನಾವರ ತಾಲೂಕಿನ ಕಡಬಗಟ್ಟಿ ಬಳಿಯ ಧಾರವಾಡ-ಅಳ್ನಾವರ-ಗೋವಾ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಮೂವರು ಮೃತಪಟ್ಟಿದ್ದಾರೆ.

ಐಶರ್ ವಾಹನದಲ್ಲಿದ್ದ ಶಿರಸಂಗಿಯ ಹನುಮಂತಪ್ಪ ಮಲ್ಲಾಡ (45), ಮಹಾಂತೇಶ್ ಚವ್ಹಾಣ್ (40), ಮಹದೇವ ಹಾಲೊಳ್ಳಿ (40) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಐವರಿಗೆ ಗಂಭೀರ ಗಾಯಾವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಶಿರಸಂಗಿ ಗ್ರಾಮದ ರೈತರಾದ ಹನುಮಂತಪ್ಪ ಮಲ್ಲಾಡ, ಮಹಾಂತೇಶ್ ಚವ್ಹಾಣ್ ಮತ್ತು ಮಹದೇವ ಹಾಲೊಳ್ಳಿ ಐಶರ್ ವಾಹನದಲ್ಲಿ ಮೇವಿನ ಹೊಟ್ಟು ತುಂಬಿಕೊಂಡು ಗೋವಾದ ಕಡೆಗೆ ಹೊರಟಿದ್ದರು. ಗೋವಾದಲ್ಲಿ ಮೇವಿನ ಹೊಟ್ಟಿಗೆ ಹೆಚ್ಚಿನ ಬೇಡಿಕೆ ಹಿನ್ನೆಲೆಯಲ್ಲಿ ಹೊಟ್ಟು ಮಾರಾಟ ಮಾರಲು ಧಾರವಾಡ ಕಡೆಯಿಂದ ಗೋವಾಗೆ ತೆರಳುತ್ತಿದ್ದರು.

ಎದುರಿಗೆ, ಗೋವಾದಿಂದ ಚಿತ್ರದುರ್ಗದ ಕಡೆ ಟಿಟಿ ವಾಹನ ಬರುತ್ತಿತ್ತು. ಅಳ್ನಾವರ ತಾಲೂಕಿನ ಕಡಬಗಟ್ಟಿ ಬಳಿ ಐಶರ್​ ಮತ್ತು ಟಿಟಿ ವಾಹನ ಮುಖಾಮುಖಿ ಡಿಕ್ಕಿಯಾಗಿವೆ. ಅಳ್ನಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಶಿವಮೊಗ್ಗ ನಗರದ ಸರ್ಕೀಟ್ ಹೌಸ್ ಸರ್ಕಲ್​ನಲ್ಲಿ ರವಿವಾರ‌ ತಡರಾತ್ರಿ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಯುವಕರ ಮೃತಪಟ್ಟಿದ್ದಾರೆ. ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದೆ. ಓರ್ವ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬನನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಸಾವಿಗೀಡಾಗಿದ್ದಾರೆ. ಮೃತ ಯುವಕರ ಗುರುತು ಇನ್ನೂ ಪತ್ತೆಯಾಗಿಲ್ಲ. ಪೂರ್ವ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!