ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರ ತಾಲೂಕಿನ ವಡ್ಡರದೊಡ್ಡಿ ಗ್ರಾಮದಲ್ಲಿ ಐದು ತಿಂಗಳ ಗರ್ಭಿಣಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಕೌಟುಂಬಿಕ ಕಲಹದಿಂದ ಆತ್ಮಹತ್ಯೆ ನಡೆದಿದೆ ಎಂದು ಮೃತ ಯುವತಿಯ ಕುಟುಂಬದವರು ಆರೋಪಿಸಿದ್ದಾರೆ. 19 ವರ್ಷದ ನಯನಾ ಒಂಬತ್ತು ತಿಂಗಳ ಹಿಂದಷ್ಟೇ ಸುನೀಲ್ರನ್ನು ಮದುವೆಯಾಗಿದ್ದರು.
ಮದುವೆಯ ನಂತರ ಮಗಳನ್ನು ಚೆನ್ನಾಗಿ ನೋಡಿಕೊಂಡಿಲ್ಲ. ಕಿರುಕುಳ ನೀಡಿದ್ದಾರೆ ಎಂದು ನಯನಾ ಪೋಷಕರು ಸುನಿಲ್ ಹಾಗೂ ಅವರ ತಂದೆ ತಾಯಿ ವಿರುದ್ಧ ದೂರು ನೀಡಿದ್ದಾರೆ.
ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.



