ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಂಧ್ರಪ್ರದೇಶದ ಏಲೂರು ಜಿಲ್ಲೆಯ ಗೋದಾವರಿ ನದಿಯಲ್ಲಿ ಮುಳುಗಿ ಐವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಇಬ್ಬರು ವಿದ್ಯಾರ್ಥಿಗಳು ಅಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಮರಾವತಿಯ ಖಾಸಗಿ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳಾದ ಈ ಗುಂಪು ಸ್ನಾನಕ್ಕಾಗಿ ನದಿಗೆ ಇಳಿದಾಗ ಘಟನೆ ಸಂಭವಿಸಿದೆ. ನೀರಿನ ಹರಿವು ಹೆಚ್ಚಿದ್ದರಿಂದ ಐವರು ವಿದ್ಯಾರ್ಥಿಗಳು ಮುಳುಗಿ ಹೋಗಿದ್ದಾರೆ ಎನ್ನಲಾಗಿದೆ.
ಈವರೆಗೆ ಮೂವರು ವಿದ್ಯಾರ್ಥಿಗಳ ಮೃತದೇಹಗಳು ಪತ್ತೆಯಾಗಿದ್ದು, ಉಳಿದವರಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ. ರಕ್ಷಣಾ ತಂಡಗಳು ಸ್ಥಳದಲ್ಲಿ ತೀವ್ರ ಹುಡುಕಾಟ ನಡೆಸುತ್ತಿವೆ.
ಇದನ್ನೂ ಓದಿ:
ಈ ಘಟನೆಗೆ ಪ್ರತಿಕ್ರಿಯಿಸಿದ ಎನ್ ಚಂದ್ರಬಾಬು ನಾಯ್ಡು ಅಧಿಕಾರಿಗಳಿಗೆ ತಕ್ಷಣ ಶೋಧ ಕಾರ್ಯಾಚರಣೆಯನ್ನು ವೇಗಗೊಳಿಸುವಂತೆ ಸೂಚನೆ ನೀಡಿದ್ದಾರೆ. ಸಂತ್ರಸ್ತ ಕುಟುಂಬಗಳಿಗೆ ಅಗತ್ಯ ನೆರವು ಒದಗಿಸುವಂತೆ ಕೂಡ ತಿಳಿಸಿದ್ದಾರೆ.
ಇಬ್ಬರು ವಿದ್ಯಾರ್ಥಿಗಳಿಗೆ ಈಜು ಬರುವುದರಿಂದ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪತ್ತೆಯಾದ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿ, ನಂತರ ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.



