ವ್ಹೀಲಿಂಗ್ ಮಾಡುವ ಶೋಕಿಯಿಂದ ಬೈಕ್‌ ಕದಿಯುತ್ತಿದ್ದ ಐವರು ಯುವಕರ ಬಂಧನ

ದಿಗಂತ ವರದಿ ಮಂಡ್ಯ :

ವ್ಹೀಲಿಂಗ್ ಮಾಡುವ ಶೋಕಿಯಿಂದ ಬೈಕ್‌ಗಳನ್ನು ಕದಿಯುತ್ತಿದ್ದ ಐವರು ಯುವಕರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಎನ್. ಯತೀಶ್ ತಿಳಿಸಿದ್ದಾರೆ.
ಮಂಡ್ಯ ಸೇರಿದಂತೆ ಸುತ್ತಮುತ್ತಲ ಜಿಲ್ಲೆಗಳಲ್ಲಿ ಬೈಕ್‌ಗಳನ್ನು ಕದಿಯುತ್ತಿದ್ದ ಸುಮಾರು 28 ವರ್ಷದೊಳಗಿನ ಯುವಕರನ್ನು ಬಂಧಿಸಲಾಗಿದೆ ಎಂದು ಅವರು ಭೇಟಿಯಾದ ಸುದ್ಧಿಗಾರರಿಗೆ ತಿಳಿಸಿದರು.
ಹಣದ ಆಸೆಗೆ ಹಾಗೂ ವ್ಹೀಲಿಂಗ್ ಮಾಡುವ ಉದ್ದೇಶದಿಂದ ಡಿಯೋ ಮೋಟಾರ್ ಸೈಕಲ್‌ಗಳನ್ನು ಕದಿಯುತಿತದ್ದರು. ಕದ್ದ ದ್ವಿಚಕ್ರ ವಾಹನಗಳನ್ನು ವ್ಹೀಲಿಂಗ್ ಮಾಡುವುದು, ಇಲ್ಲವೇ ವ್ಹೀಲಿಂಗ್ ಮಾಡುವವರಿಗೆ ಮಾರಾಟ ಮಾಡುತ್ತಿದ್ದರು ಎಂದು ಅವರು ತಿಳಿಸಿದ್ದಾರೆ.
ಇನ್ನೂ ಹಲವಾರು ಪ್ರಕರಣಗಳಲ್ಲಿ ಭಾಗಿಯಾಗಿರುವ ಸಂಶಯಗಳು ಇದ್ದುಘಿ, ಬಂಧಿತ ಯುವಕರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ನಂತರ ಪೊಲೀಸ್ ವಶಕ್ಕೆ ಪಡೆಯಲಾಗಿದೆ. ಅವರಿಂದ ಹೆಚ್ಚಿನ ಮಾಹಿತಿ ಲಭ್ಯವಾಗುವುದರೊಂದಿಗೆ ಮತ್ತಷ್ಟು ಪ್ರಕರಣಗಳು ಬೆಳಕಿಗೆ ಬರುವ ಸಾಧ್ಯತೆಗಳಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!