ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ಗೆಹ್ಲೋಟ್‌ರಿಂದ ಧ್ವಜಾರೋಹಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯಾದ್ಯಂತ ಗಣರಾಜ್ಯೋತ್ಸವ ಸಂಭ್ರಮ ಮನೆಮಾಡಿದ್ದು, ರಾಜಧಾನಿ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಧ್ವಜಾರೋಹಣ ನೆರವೇರಿಸಿದ್ದಾರೆ.

ನಾಡಿನ ಸಮಸ್ತ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು, ಇದೊಂದು ಐತಿಹಾಸಿಕ ದಿನ. ನಮ್ಮ ಸಂವಿಧಾನ ನ್ಯಾಯ, ಸ್ವಾತಂತ್ರ್ಯ ಹಾಗೂ ಸಮಾನತೆ ಆಧರಿಸಿದೆ. ಸ್ವಾಭಿಮಾನದ ಧ್ಯೇಯ ಹೊಂದಿರುವ ಸಂವಿಧಾನ ನಮ್ಮದು ಎಂದು ರಾಜ್ಯಪಾಲರು ಹೇಳಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಗ್ಯಾರೆಂಟಿಗಳ ಜಾರಿ ಮಾಡಿ ಜನರಿಗೆ ಸಹಾಯ ಮಾಡಿದೆ. ಗೃಹಲಕ್ಷ್ಮೀ, ಗೃಹಜ್ಯೋತಿ ಇನ್ನಿತರ ಯೋಜನೆಗಳಿಂದ ಮಹಿಳೆಯರಿಗೆ ಸಹಾಯವಾಗಿದೆ. ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದುಕೊಂಡಿದೆ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!