ಹೊಸದಿಗಂತ ಡಿಜಿಟಲ್ ಡೆಸ್ಕ್:
ಮನೆ ಬಾಗಿಲಿಗೆ ತಾಜಾ ಮೀನು ಒದಗಿಸಲು ಹಾಗೂ ಮೀನುಗಾರರ ಸಮಸ್ಯೆಗಳ ಪರಿಹಾರಕ್ಕಾಗಿ 150 ಮತ್ಸ್ಯವಾಹಿನಿ ವಾಹನಗಳಿಗೆ ರಾಜ್ಯ ಸರ್ಕಾರದಿಂದ ಚಾಲನೆ ದೊರೆತಿದೆ.
ವಿಶ್ವ ಮೀನುಗಾರಿಕೆ ದಿನಾಚರಣೆ ಅಂಗವಾಗಿ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ.
ನೂತನ 150 ಮತ್ಸ್ಯವಾಹಿನಿ ವಾಹನಗಳು ಬೆಂಗಳೂರು ನಗರದಲ್ಲಿ ಸಂಚರಿಸಲಿದ್ದು, ಬೆಳಗ್ಗೆ ತಾಜಾ ಮೀನು, ಸಂಜೆ ಮೀನು ಖಾದ್ಯಗಳ ಮಾರಾಟ ಮಾಡಲಾಗುತ್ತದೆ. ವಾಹನ ಭದ್ರತಾ ಠೇವಣಿ 2 ಲಕ್ಷ ರೂ ಹಾಗೂ ಮಾಸಿಕ 3000 ರೂ. ಬಾಡಿಗೆಯನ್ನು ರಾಜ್ಯ ಸರ್ಕಾರದಿಂದ ನೀಡಲಾಗುತ್ತದೆ. ಬ್ಯಾಟರಿ ಚಾಲಿತ ತ್ರಿಚಕ್ರ ವಾಹನದಲ್ಲಿ ಮೀನು ಖಾದ್ಯ ಮಾಡುವ ವ್ಯವಸ್ಥೆ ಕೂಡ ಇದ್ದು, ಮುಂದಿನ ದಿನಗಳಲ್ಲಿ ಉಳಿದ ಜಿಲ್ಲೆಗಳಿಗೆ 150 ವಾಹನಗಳನ್ನು ಸರ್ಕಾರ ವಿತರಿಸುವ ಸಾಧ್ಯತೆ ಇದೆ.